ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ

ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ ಭಾಗವಾದ ಭಾರತದ ಭೂಮಿಯೆಲ್ಲವೂ ಅದರೊಳಗೆ ಹುದುಗಿರುವ ಪ್ರಾಣವೆಲ್ಲವು ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ || ಪ || ದಶಮಿಯಂದು ಪೂಜಿಸಿಟ್ಟ ಖಡ್ಗ ಕರದಿ ಧರಿಸಿ ಅರಿಯ ರುಂಡಮುಂಡವೆಲ್ಲ ಕಾಳಿಪಾದ ಸೇರಿಸಿ ಸಮಾಜಕಡಲ ಸದ್ಭಾವವ ಜಾಗೃತಗೊಳಿಸಿ ಕ್ಷಾತ್ರ ಬಲದ ಇರುವಿಕೆಯ ಸತ್ಯ ಅರುಹಿಸಿ || 1 || ಶಿವಪ್ರತಾಪ ಧೀರಪಂಥ ಸೈನ್ಯವೇ ನಮದು ರಾಣಿ ಝಾನ್ಸಿ, ಚೆನ್ನಮ್ಮರ ಕುವರರು ನಾವು ತಾಯಮಮತೆ ಋಣಕೆ ಬಾಳ ಮುಡಿಪನಿಡುವೆವು ಧರ್ಮಕಾಗಿ ಸ್ವಾರ್ಥವನ್ನು ತೊರೆದುಬಿಡುವವು || 2 […]

Read More

ವನವಾಸ ಕಳೆದದ್ದಾಯಿತು

ವನವಾಸ ಕಳೆದದ್ದಾಯಿತು ಬಾರೋ ರಾಮ ಒಳಗೆ ಬಯಲಲ್ಲಿ ಕಾದದ್ದಾಯಿತು ಬಾರೋ ನಿನ್ನ ಅರಮನೆಗೆ || ಪ || ಸುಖಮಯ ಭವಿಷ್ಯ ಪಣವಿಟ್ಟು ಕರಸೇವಕರು ನೂರಾರು ಯುಗಸಂಕಲ್ಪವೀಡೇರಲು ಭೀಮ ಸಾಹಸ ತೋರಿದರು ತ್ಯಾಗ ಶೌರ್ಯ ಮೆರೆಯುತಲಿ ಪೀಳಿಗೆಯಿಂದ ಪೀಳಿಗೆಗೆ ಸೃಜಿಸುತಲಿ ನವ ಇತಿಹಾಸ, ಬಾರೋ ನಿನ್ನ ಅರಮನೆಗೆ || 1 || ರಾಮನ ವಚನವು ಎಂದೆಂದೂ ಸುಳ್ಳಾದದ್ದೇ ಕಂಡಿಲ್ಲ ರಾಮನ ಬಾಣವು ಎಂದಿಗೂ ಗುರಿ ತಪ್ಪಿದ್ದೇ ನೋಡಿಲ್ಲ ನಿನ್ನಯ ಭಕ್ತರ ಸಂಕಲ್ಪ ಅಮಿತ ಭಕ್ತಿಯ ಶಕ್ತಿಗೆ ಎಂದೂ ಕೂಡ […]

Read More

ಜಯ ಜಯವೆನ್ನಿರಿ ಭಾರತಿಗೆ

ಜಯ ಜಯವೆನ್ನಿರಿ ಭಾರತಿಗೆ ಜನಹೃನ್ಮಂದಿರ ದೇವತೆಗೆ || ಪ || ಜ್ವಾಲಾಮುಖಿಯೊಳು ಉರಿಗಣ್ ತೆರೆದಿವೆ ಸುಪ್ತ ಹಿಮಾಚಲ ಶೃಂಗಗಳು ಕನ್ಯಾಕುಮಾರಿಯ ತಟದಿಂ ಹೊರಟಿವೆ ಎತ್ತರದೆಡೆಗೆ ರಥಾಂಗಗಳು ಡಮ ಡಮ ಡಮರು – ನಾದ ಶುಭಂಕರ ಮಾರ್ದನಿಗೊಳುತಿದೆ ದೆಸೆದೆಸೆಗೆ || 1 || ಸಾಗರ ಸಂಗಮ ದಾಟಿದ ಜಂಗಮ ವಿವೇಕ ಬೋಧಿಸೆ ಜಗದಗಲ ಕಾಲಡಿ ಶಂಕರ ಗೌರಿಶಂಕರ ಪೂಜೆಗೆ ಒಯ್ದನು ಹೃತ್ಕಮಲ ಹಿಂದುತ್ವದ ಹೂಂಕಾರ ಶಿವಂಕರ ಪೌರುಷ ತುಂಬುತೆ ಎದೆ‍ಎದೆಗೆ || 2 || ರಾಷ್ಟ್ರಚಿರಂತನ ಕೇಶವ ಚಿಂತನ […]

Read More

ನವ ಭಾರತ ಶಿಲ್ಪಿಗಳಾಗೋಣ

ನವ ಭಾರತ ಶಿಲ್ಪಿಗಳಾಗೋಣ ಹೊಸ ಬಾಳಿನ ಭಾಗ್ಯವ ಬರೆಯೋಣ || ಪ || ಗಂಗೆಯ ತಂದ ಭಗೀರಥನಂತೆ ವಿಷವನು ಉಂಡ ನಂಜುಂಡನಂತೆ ತಪವನು ಗೈದು ವಿಷವನ್ನು ಕುಡಿದು ಸಮಾಜ ದೇವಗೆ ಪ್ರಾಣವ ಎರೆದು || 1 || ಕಾಣುವ ಅರಿಗಳ ಅಟ್ಟುತ ಯೋಧರು ಕಾಣದ ವೈರಿಯ ಮೆಟ್ಟುತ ವೈದ್ಯರು ಕಾಯಕ ಯೋಗಿಯ ತರದಲಿ ರೈತರು ತಾಯಿಯ ಕಷ್ಟವ ತೊಳೆಯುತಲಿಹರು. || 2 || ನವ ಚೈತನ್ಯದ ನವ ಕುಸುಮಗಳು ಕಾಣುತ ಹೊರಟಿವೆ ನವ ಕನಸುಗಳು ಭಾರತ ಮಾತೆಯು […]

Read More

ನಗರಗಳು ಸಾಕೆಂದು ನಮ್ಮೂರೆ ಮೇಲೆಂದು

ನಗರಗಳು ಸಾಕೆಂದು ನಮ್ಮೂರೆ ಮೇಲೆಂದು ಯುವಜನತೆ ಮುಖ ಮಾಡಿ ತಮ್ಮೂರಿಗೆ ಜೀತದ ನೌಕರಿಯ ಧಿಕ್ಕರಿಸಿ ನಡೆದಿಹರು ಮನ ಮಾಡಿ ಆತ್ಮನಿರ್ಭರದೆಡೆಗೆ || ಪ || ಕೃಷಿಯ ಕಷ್ಟವೂ ಏಕೆ, ನಗರ ಸುಖದಾ ಬಯಕೆ ಹೊತ್ತಿತ್ತು ಯುವಜನರ ಆತ್ಮದೊಳಗೆ ದೂರದಾ ಬೆಟ್ಟವದು ನುಣ್ಣಗೆಂದರಿಯದೆ ಬಿದ್ದಿತ್ತು  ದಾಸ್ಯದಾ ಕೂಪದೊಳಗೆ ಗಡಿಬಿಡಿಯ ಓಡಾಟ, ಕೆಲಸದ ಜಂಜಾಟ ಹೊತ್ತು ಕೂಳಿಗೂ ಸಮಯ ಸಿಗದೆ || 1 ||  ಜೀತದ…. ಈ ಕೆಲಸವೇ ಮೇಲು ಆ ಕೆಲಸ ಬಲು ಕೀಳು ಬಿತ್ತಿತ್ತು ಭಾವನೆಯು ಮನದದೊಳಗೆ […]

Read More

ದೇವಿ ಭಾರತಿ ನಿನ್ನ ಸಮರನು

ದೇವಿ ಭಾರತಿ ನಿನ್ನ ಸಮರನು ಕಾಣೆವೈ ಈ ಜಗದಲಿ ದೇವ ರಾಮನು ಸೀತ ಮಾತೆಯು ಬೆಳದರೈ ನಿನ ಮಡಿಲಲಿ || ಪ || ಪೂರ್ವ ಪಶ್ಚಿಮ ದಕ್ಷಿಣೋತ್ತರ ಹಬ್ಬಿದೇ ನಿನ್ನ ಕೀರುತಿ ಸಾರ್ವ ಭೌಮಿಯು ಸಪ್ತ ಲೋಕದಿ ನೀನೆ ಮಂಗಳೆ ಭಾರತಿ || 1 || ಗಂಗೆ ಯಮುನಾ ಸಿಂಧು ಸರಸ್ವತಿ ಇವರೆ ನಿನ್ನಯ ಕಂಗಳು ತುಂಗ ಭದ್ರ ಕಾವೇರಿ ಭೀಮರು ಚರಣ ತೊಳೆಯುವ ಮಕ್ಕಳು || 2 || ಚಂದ್ರ ಶೇಖರ ಭಗತ್ ಸಿಂಗರು ಭೋಸು […]

Read More

ಯೋಗ ಮಾಡಿರೋ ಎಲ್ಲರು ಯೋಗವ ಮಾಡಿರೋ

ಯೋಗ ಮಾಡಿರೋ ಎಲ್ಲರು ಯೋಗವ ಮಾಡಿರೋ ಎಲ್ಲ ಭೋಗವ ಬದಿಗೆ ಇಟ್ಟು, ಆರೋಗ್ಯವಂತರಾಗಲು ಇಂದು|| ಪ || ರೋಗ-ರುಜಿನವಾ ದೂರವಿರಿಸಲು, ಪ್ರತಿದಿನ ಹರುಷದಿ ಬದುಕಲು ನೀವು ಋಷಿ ಪುಂಗವರ ನೆನೆಯುತ ನೀವು, ಸಾಧಕರಾಗಿ ಬೆಳೆಯಲು ಎಲ್ಲರು ||ಯೋಗ..|| ಸೂರ್ಯನಮಸ್ಕಾರ ಮಾಡಲು ದಿನವೂ, ಸಂಪೂರ್ಣ ಫಲವ ಪಡೆವಿರಿ ನೀವು| ಪ್ರಾಣಾಯಾಮವ ಮಾಡಲು ನಿಮಗೆ, ನೂರು ವರುಷದ ಆಯುಷ್ಯವಿಹುದು ||ಯೋಗ ..|| ವಜ್ರಕಾಯವ ಗಳಿಸಲು ನೀವು ವಜ್ರಾಸನವ ಮಾಡಿಯೇ ನೋಡಿ ಚುರುಕುತನದ ಬುದ್ಧಿಗಾಗಿ, ಶೀರ್ಷಾಸನವ ಮಾಡಿಯೇ ನೋಡಿ||ಯೋಗ..|| ಅರ್ಧ ತಾಸಿನ […]

Read More

ದಕ್ಷತೆಯಿಂದಲಿ ರಕ್ಷೆಯ ಕಟ್ಟುವ ಹಿರಿಮೆಯ

ದಕ್ಷತೆಯಿಂದಲಿ ರಕ್ಷೆಯ ಕಟ್ಟುವ ಹಿರಿಮೆಯ ನೆನಪಿಸುತ ಇದರೊಲುಮೆಯ ಗಮನಿಸುತ | ಅಕ್ಷಯವಾಗಲಿ ಲಕ್ಷ್ಮಣ ಪ್ರೀತಿಯು ಸಮರಸ ಮೆರೆಯಲಿದೋ ಜಗವನೆ ಬೆಳಗಲಿದೋ  || ಪ ||   ಮೇಲು-ಕೀಳಿನ ಭೇದವ ಮರೆಯುವ ಬಡವ-ಬಲ್ಲಿದ ಭಾವವ ನೀಗುವ ಪಂಡಿತ-ಪಾಮರ ತರತಮ ತೊರೆಯುವ ಜಾತಿ ಧರ್ಮವ ಮರೆಯುತ ಒಲವಲಿ ಕಟ್ಟುವ ಕೈಗಳಿಗೇ…ತಟ್ಟಲಿ ಮನಗಳಿಗೆ || 1 ||   ಪುರಾಣದಿಂದಲೂ ರಕ್ಷೆಯ ಮಹಿಮೆ ಚರಿತೆಯಲೂ ಇದೆ ಇದರದೇ ಹಿರಿಮೆ ಸೋದರ ಭಾವವು ಸೋದರಿ ರಕ್ಷಣೆ ಇಂದಿನ ದಿನದೀ ಎಲ್ಲರ ಭದ್ರತೆ ನಮದದು […]

Read More

ಆಕಾಶಕೆದ್ದುನಿಂತ ಪರ್ವತ ಹಿಮ ಮೌನದಲ್ಲಿ

ಆಕಾಶಕೆದ್ದುನಿಂತ ಪರ್ವತ ಹಿಮ ಮೌನದಲ್ಲಿ ಕರಾವಳಿಗೆ ಮುತ್ತನಿಡುವ ಪೆರ್ದೆರೆಗಳ ಗಾನದಲ್ಲಿ ಬಯಲ ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ ನೀಲಿಯಲ್ಲಿ ಹೊಗೆಯ ಚೆಲ್ಲಿ ಯಂತ್ರ ಘೋಷವೇಳುವಲ್ಲಿ ಕಣ್ಣು ಬೇರೆ, ನೋಟ ಒಂದು ನಾವು ಭಾರತೀಯರು || ಪ || ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಲಿನಲ್ಲಿ ನಮ್ಮ ಯೋಧರೆತ್ತಿಹಿಡಿದ ನಮ್ಮ ಧ್ವಜದ ನೆರಳಿನಲ್ಲಿ ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದ ನಮ್ಮ ಕೊರಳಿನಲ್ಲಿ ನಮ್ಮ ಯುಗದ ದನಿಗಳಾಗಿ ಮೂಡಿದೆಲ್ಲ ಹಾಡಿನಲ್ಲಿ ಭಾಷೆ ಬೇರೆ ಭಾವವೊಂದು ನಾವು ಭಾರತೀಯ || […]

Read More

ಶ್ರೀಗಂಧಾ ಈ ನೆಲದ ಮಣ್ಣಿದು ತಪೋವನವು ಪ್ರತಿ ಗ್ರಾಮವು

ಶ್ರೀಗಂಧಾ ಈ ನೆಲದ ಮಣ್ಣಿದು ತಪೋವನವು ಪ್ರತಿ ಗ್ರಾಮವು ಪ್ರತಿ ಮಗಳೂ ಆ ದೇವಿಯ ರೂಪ ಪ್ರತಿ ಮಗನೂ ಶ್ರೀರಾಮನು || ಪ || ಪ್ರತಿ ಶರೀರ ಮಂದಿರದೊಲು ಪಾವನ ಪ್ರತಿ ಮಾನವ ಉಪಕಾರಿಯು ಸಿಂಹವೇ ಇಲ್ಲಿ ಮಕ್ಕಳ ಆಟಿಕೆ ಹಸುವೇ ಇಲ್ಲಿದೋ ತಾಯಿಯು ಬೆಳಗಿನ ಸಮಯದಿ ಶಂಖದ ಧ್ವನಿಯು ಸಂಜೆಗೆ ತಪ್ಪದೆ ಜೋಗುಳವು ||ಪ್ರತಿ ಮಗಳೂ|| ಕರ್ಮದ ಮೇಲೆ ಭಾಗ್ಯವು ಬದಲು ಶ್ರಮನಿಷ್ಠೆಗಳೇ ಕಲ್ಯಾಣವು ತ್ಯಾಗ ತಪದ ಪಾರಾಯಣ ಗೈವ ಕವಿ ಮನಸಿನ ಸಿಹಿವಾಣಿಯು ಜ್ಞಾನವು […]

Read More