ಸಂಕಟದಾ ಕರಿಮೋಡದ ಛಾಯೆಯು (ದೃಢಸಂಕಲ್ಪವ ಮಾಡೋಣ)

ಸಂಕಟದಾ ಕರಿಮೋಡದ ಛಾಯೆಯು ವ್ಯಾಪಿಸಿದೆ ನಮ್ಮೆಲ್ಲರನೂ ಪೂರ್ಣಶಕ್ತಿಯಲಿ ದುಃಖವನಳಿಸುವ ದೃಢಸಂಕಲ್ಪವ ಮಾಡೋಣ || ಪ || ಈ ಸಂಘವು ಎಲ್ಲಿಯವರೆಗೋ ತಿಳಿಯದಾಗಿದೆ ನಮಗಿಂದು ಏನೇ ಇರಲಿ ಹೇಗೇ ಇರಲಿ ನಮ್ಮಯ ಗುರಿಯು ದಿಟವಿಂದು ಸಕ್ರಿಯರಾಗಿ ಶ್ರಮಿಸುವ ವ್ರತವನು ಸ್ವೀಕರಿಸುತ ಮುನ್ನಡೆಯೋಣ ಪೂರ್ಣಶಕ್ತಿಯಲಿ ದುಃಖವನಳಿಸುವ ದೃಢಸಂಕಲ್ಪವ ಮಾಡೋಣ || 1 || ಭೇಟಿಯು ಇಲ್ಲ ಕೂಟವು ಇಲ್ಲ, ಆದರೂ ಸ್ನೇಹವನರಳಿಸುವಾ ಧೈರ್ಯವ ತುಂಬುತ ಪ್ರೀತಿಯ ತೋರಿ ದೈನ್ಯ ನಿರಾಸೆಯ ನೀಗಿಸುವಾ ದುಃಖಿತ ಪೀಡಿತ ಬಂಧುಬಾಂಧವರ ಸೇವೆಯ ನಾವು ಗೈಯೋಣ […]

Read More

ಶ್ರಾವಣದ ಸಂಭ್ರಮದಲಿ

ಸ್ವಾತಂತ್ರ ಗೀತೆ ರಾಗ : ಹಿಂದೋಳ ಚತುರಶ್ರ ಏಕ ತಾಳ ಶ್ರಾವಣದ ಸಂಭ್ರಮದಲಿ ಸ್ವಾತಂತ್ರದ ಹೊಸ್ತಿಲಲಿ ನೆನೆಯೋಣ ಸೇನಾನಿಗಳ ಅಮರ ತ್ಯಾಗ ಸಾಹಸದ ಕಥನಗಳ ಸಾರುತ್ತಾ ಸ್ಮರಿಸೋಣ ಬಲಿದಾನಿಗಳ || ಶ್ರಾವಣದ ಸಂಭ್ರಮದಲಿ || ಧರ್ಮ ಭೂಮಿ ಭಾರತವ ಒಡೆದಾಳಲು ಬಂದಿದ್ದ ಬಿಳಿಯರಿಗೆ ಅಸ್ತ್ರ ಹಿಡಿದು ಮಾರಕನಾದೆ ಪ್ರಥಮ ಸಂಗ್ರಾಮದಲಿ ಅಗ್ನಿಜ್ವಾಲೆ ಸಿಡಿಸುತ್ತಾ ಕರ್ಮ ಭೂಮಿ ಭಾರತಕ್ಕೆ ಮಂಗಳನಾದೆ ಮಂಗಳನಾದೆ..! || ಶ್ರಾವಣದ ಸಂಭ್ರಮದಲಿ || ಶೂರವೀರ ಪರಂಪರೆಯ ಸಾಮ್ರಾಜ್ಯವ ಕಸಿಯುತ್ತಾ ಮೆರೆಯುತ್ತಿದ್ದ ದುರುಳ ದೊರೆಯ ಎದುರಿಸಿ […]

Read More

ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ

ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ ಭಾಗವಾದ ಭಾರತದ ಭೂಮಿಯೆಲ್ಲವೂ ಅದರೊಳಗೆ ಹುದುಗಿರುವ ಪ್ರಾಣವೆಲ್ಲವು ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ || ಪ || ದಶಮಿಯಂದು ಪೂಜಿಸಿಟ್ಟ ಖಡ್ಗ ಕರದಿ ಧರಿಸಿ ಅರಿಯ ರುಂಡಮುಂಡವೆಲ್ಲ ಕಾಳಿಪಾದ ಸೇರಿಸಿ ಸಮಾಜಕಡಲ ಸದ್ಭಾವವ ಜಾಗೃತಗೊಳಿಸಿ ಕ್ಷಾತ್ರ ಬಲದ ಇರುವಿಕೆಯ ಸತ್ಯ ಅರುಹಿಸಿ || 1 || ಶಿವಪ್ರತಾಪ ಧೀರಪಂಥ ಸೈನ್ಯವೇ ನಮದು ರಾಣಿ ಝಾನ್ಸಿ, ಚೆನ್ನಮ್ಮರ ಕುವರರು ನಾವು ತಾಯಮಮತೆ ಋಣಕೆ ಬಾಳ ಮುಡಿಪನಿಡುವೆವು ಧರ್ಮಕಾಗಿ ಸ್ವಾರ್ಥವನ್ನು ತೊರೆದುಬಿಡುವವು || 2 […]

Read More

ವನವಾಸ ಕಳೆದದ್ದಾಯಿತು

ವನವಾಸ ಕಳೆದದ್ದಾಯಿತು ಬಾರೋ ರಾಮ ಒಳಗೆ ಬಯಲಲ್ಲಿ ಕಾದದ್ದಾಯಿತು ಬಾರೋ ನಿನ್ನ ಅರಮನೆಗೆ || ಪ || ಸುಖಮಯ ಭವಿಷ್ಯ ಪಣವಿಟ್ಟು ಕರಸೇವಕರು ನೂರಾರು ಯುಗಸಂಕಲ್ಪವೀಡೇರಲು ಭೀಮ ಸಾಹಸ ತೋರಿದರು ತ್ಯಾಗ ಶೌರ್ಯ ಮೆರೆಯುತಲಿ ಪೀಳಿಗೆಯಿಂದ ಪೀಳಿಗೆಗೆ ಸೃಜಿಸುತಲಿ ನವ ಇತಿಹಾಸ, ಬಾರೋ ನಿನ್ನ ಅರಮನೆಗೆ || 1 || ರಾಮನ ವಚನವು ಎಂದೆಂದೂ ಸುಳ್ಳಾದದ್ದೇ ಕಂಡಿಲ್ಲ ರಾಮನ ಬಾಣವು ಎಂದಿಗೂ ಗುರಿ ತಪ್ಪಿದ್ದೇ ನೋಡಿಲ್ಲ ನಿನ್ನಯ ಭಕ್ತರ ಸಂಕಲ್ಪ ಅಮಿತ ಭಕ್ತಿಯ ಶಕ್ತಿಗೆ ಎಂದೂ ಕೂಡ […]

Read More

ಜಯ ಜಯವೆನ್ನಿರಿ ಭಾರತಿಗೆ

ಜಯ ಜಯವೆನ್ನಿರಿ ಭಾರತಿಗೆ ಜನಹೃನ್ಮಂದಿರ ದೇವತೆಗೆ || ಪ || ಜ್ವಾಲಾಮುಖಿಯೊಳು ಉರಿಗಣ್ ತೆರೆದಿವೆ ಸುಪ್ತ ಹಿಮಾಚಲ ಶೃಂಗಗಳು ಕನ್ಯಾಕುಮಾರಿಯ ತಟದಿಂ ಹೊರಟಿವೆ ಎತ್ತರದೆಡೆಗೆ ರಥಾಂಗಗಳು ಡಮ ಡಮ ಡಮರು – ನಾದ ಶುಭಂಕರ ಮಾರ್ದನಿಗೊಳುತಿದೆ ದೆಸೆದೆಸೆಗೆ || 1 || ಸಾಗರ ಸಂಗಮ ದಾಟಿದ ಜಂಗಮ ವಿವೇಕ ಬೋಧಿಸೆ ಜಗದಗಲ ಕಾಲಡಿ ಶಂಕರ ಗೌರಿಶಂಕರ ಪೂಜೆಗೆ ಒಯ್ದನು ಹೃತ್ಕಮಲ ಹಿಂದುತ್ವದ ಹೂಂಕಾರ ಶಿವಂಕರ ಪೌರುಷ ತುಂಬುತೆ ಎದೆ‍ಎದೆಗೆ || 2 || ರಾಷ್ಟ್ರಚಿರಂತನ ಕೇಶವ ಚಿಂತನ […]

Read More

ನವ ಭಾರತ ಶಿಲ್ಪಿಗಳಾಗೋಣ

ನವ ಭಾರತ ಶಿಲ್ಪಿಗಳಾಗೋಣ ಹೊಸ ಬಾಳಿನ ಭಾಗ್ಯವ ಬರೆಯೋಣ || ಪ || ಗಂಗೆಯ ತಂದ ಭಗೀರಥನಂತೆ ವಿಷವನು ಉಂಡ ನಂಜುಂಡನಂತೆ ತಪವನು ಗೈದು ವಿಷವನ್ನು ಕುಡಿದು ಸಮಾಜ ದೇವಗೆ ಪ್ರಾಣವ ಎರೆದು || 1 || ಕಾಣುವ ಅರಿಗಳ ಅಟ್ಟುತ ಯೋಧರು ಕಾಣದ ವೈರಿಯ ಮೆಟ್ಟುತ ವೈದ್ಯರು ಕಾಯಕ ಯೋಗಿಯ ತರದಲಿ ರೈತರು ತಾಯಿಯ ಕಷ್ಟವ ತೊಳೆಯುತಲಿಹರು. || 2 || ನವ ಚೈತನ್ಯದ ನವ ಕುಸುಮಗಳು ಕಾಣುತ ಹೊರಟಿವೆ ನವ ಕನಸುಗಳು ಭಾರತ ಮಾತೆಯು […]

Read More

ನಗರಗಳು ಸಾಕೆಂದು ನಮ್ಮೂರೆ ಮೇಲೆಂದು

ನಗರಗಳು ಸಾಕೆಂದು ನಮ್ಮೂರೆ ಮೇಲೆಂದು ಯುವಜನತೆ ಮುಖ ಮಾಡಿ ತಮ್ಮೂರಿಗೆ ಜೀತದ ನೌಕರಿಯ ಧಿಕ್ಕರಿಸಿ ನಡೆದಿಹರು ಮನ ಮಾಡಿ ಆತ್ಮನಿರ್ಭರದೆಡೆಗೆ || ಪ || ಕೃಷಿಯ ಕಷ್ಟವೂ ಏಕೆ, ನಗರ ಸುಖದಾ ಬಯಕೆ ಹೊತ್ತಿತ್ತು ಯುವಜನರ ಆತ್ಮದೊಳಗೆ ದೂರದಾ ಬೆಟ್ಟವದು ನುಣ್ಣಗೆಂದರಿಯದೆ ಬಿದ್ದಿತ್ತು  ದಾಸ್ಯದಾ ಕೂಪದೊಳಗೆ ಗಡಿಬಿಡಿಯ ಓಡಾಟ, ಕೆಲಸದ ಜಂಜಾಟ ಹೊತ್ತು ಕೂಳಿಗೂ ಸಮಯ ಸಿಗದೆ || 1 ||  ಜೀತದ…. ಈ ಕೆಲಸವೇ ಮೇಲು ಆ ಕೆಲಸ ಬಲು ಕೀಳು ಬಿತ್ತಿತ್ತು ಭಾವನೆಯು ಮನದದೊಳಗೆ […]

Read More

ದೇವಿ ಭಾರತಿ ನಿನ್ನ ಸಮರನು

ದೇವಿ ಭಾರತಿ ನಿನ್ನ ಸಮರನು ಕಾಣೆವೈ ಈ ಜಗದಲಿ ದೇವ ರಾಮನು ಸೀತ ಮಾತೆಯು ಬೆಳದರೈ ನಿನ ಮಡಿಲಲಿ || ಪ || ಪೂರ್ವ ಪಶ್ಚಿಮ ದಕ್ಷಿಣೋತ್ತರ ಹಬ್ಬಿದೇ ನಿನ್ನ ಕೀರುತಿ ಸಾರ್ವ ಭೌಮಿಯು ಸಪ್ತ ಲೋಕದಿ ನೀನೆ ಮಂಗಳೆ ಭಾರತಿ || 1 || ಗಂಗೆ ಯಮುನಾ ಸಿಂಧು ಸರಸ್ವತಿ ಇವರೆ ನಿನ್ನಯ ಕಂಗಳು ತುಂಗ ಭದ್ರ ಕಾವೇರಿ ಭೀಮರು ಚರಣ ತೊಳೆಯುವ ಮಕ್ಕಳು || 2 || ಚಂದ್ರ ಶೇಖರ ಭಗತ್ ಸಿಂಗರು ಭೋಸು […]

Read More

ಯೋಗ ಮಾಡಿರೋ ಎಲ್ಲರು ಯೋಗವ ಮಾಡಿರೋ

ಯೋಗ ಮಾಡಿರೋ ಎಲ್ಲರು ಯೋಗವ ಮಾಡಿರೋ ಎಲ್ಲ ಭೋಗವ ಬದಿಗೆ ಇಟ್ಟು, ಆರೋಗ್ಯವಂತರಾಗಲು ಇಂದು|| ಪ || ರೋಗ-ರುಜಿನವಾ ದೂರವಿರಿಸಲು, ಪ್ರತಿದಿನ ಹರುಷದಿ ಬದುಕಲು ನೀವು ಋಷಿ ಪುಂಗವರ ನೆನೆಯುತ ನೀವು, ಸಾಧಕರಾಗಿ ಬೆಳೆಯಲು ಎಲ್ಲರು ||ಯೋಗ..|| ಸೂರ್ಯನಮಸ್ಕಾರ ಮಾಡಲು ದಿನವೂ, ಸಂಪೂರ್ಣ ಫಲವ ಪಡೆವಿರಿ ನೀವು| ಪ್ರಾಣಾಯಾಮವ ಮಾಡಲು ನಿಮಗೆ, ನೂರು ವರುಷದ ಆಯುಷ್ಯವಿಹುದು ||ಯೋಗ ..|| ವಜ್ರಕಾಯವ ಗಳಿಸಲು ನೀವು ವಜ್ರಾಸನವ ಮಾಡಿಯೇ ನೋಡಿ ಚುರುಕುತನದ ಬುದ್ಧಿಗಾಗಿ, ಶೀರ್ಷಾಸನವ ಮಾಡಿಯೇ ನೋಡಿ||ಯೋಗ..|| ಅರ್ಧ ತಾಸಿನ […]

Read More

ದಕ್ಷತೆಯಿಂದಲಿ ರಕ್ಷೆಯ ಕಟ್ಟುವ ಹಿರಿಮೆಯ

ದಕ್ಷತೆಯಿಂದಲಿ ರಕ್ಷೆಯ ಕಟ್ಟುವ ಹಿರಿಮೆಯ ನೆನಪಿಸುತ ಇದರೊಲುಮೆಯ ಗಮನಿಸುತ | ಅಕ್ಷಯವಾಗಲಿ ಲಕ್ಷ್ಮಣ ಪ್ರೀತಿಯು ಸಮರಸ ಮೆರೆಯಲಿದೋ ಜಗವನೆ ಬೆಳಗಲಿದೋ  || ಪ ||   ಮೇಲು-ಕೀಳಿನ ಭೇದವ ಮರೆಯುವ ಬಡವ-ಬಲ್ಲಿದ ಭಾವವ ನೀಗುವ ಪಂಡಿತ-ಪಾಮರ ತರತಮ ತೊರೆಯುವ ಜಾತಿ ಧರ್ಮವ ಮರೆಯುತ ಒಲವಲಿ ಕಟ್ಟುವ ಕೈಗಳಿಗೇ…ತಟ್ಟಲಿ ಮನಗಳಿಗೆ || 1 ||   ಪುರಾಣದಿಂದಲೂ ರಕ್ಷೆಯ ಮಹಿಮೆ ಚರಿತೆಯಲೂ ಇದೆ ಇದರದೇ ಹಿರಿಮೆ ಸೋದರ ಭಾವವು ಸೋದರಿ ರಕ್ಷಣೆ ಇಂದಿನ ದಿನದೀ ಎಲ್ಲರ ಭದ್ರತೆ ನಮದದು […]

Read More