ಮಾಘ ಮಾಸದ ಚಳಿಯದು ಮಾಗುತ ಬರುತಿದೆ ಸಂಕ್ರಮಣ ಉತ್ತರದೆಡೆಗೆ ಅರುಣನ ಪಯಣ ಕಿರಣದ ಸಂಚಲನ ಇರುಳನು ಸರಿಸುತ ಬೆಳಕನು ಹರಿಸುತ ಜ್ಞಾನದ ಅನುರಣನ ವ್ಯಕ್ತಿ ವ್ಯಕ್ತಿಯೊಳು ಮೊಳಗಿದೆ ಗಾನ ಹಿಂದೂ ಜಾಗರಣ || ಪ || ಬೆಲ್ಲದ ಸಿಹಿಯೊಳು ಎಳ್ಳಿನ ಜಿಡ್ಡೊಳು ಅಡಗಿದೆ ಗೆಲ್ಲುವ ಜಿದ್ದು ಜ್ಯೋತಿರ್ವರ್ಷದ ವೇಗದಿ ಹರಡಿದೆ ರಾಷ್ಟ್ರ ಭಕ್ತಿಯ ಸದ್ದು ಧರ್ಮದ ರಕ್ಷೆಯೆ ರಾಷ್ಟ್ರ ರಕ್ಷೆಯು ಬಾ ಹಿಂದುವೆ ಸಿಡಿದೆದ್ದು ಶತ್ರುವಿನೆದೆಯನು ಸೀಳುವ ಛಲವಿರೆ ಭದ್ರವು ಸರಹದ್ದು || 1 || ತಾಯಿ […]
ವ್ರತವ ತೊಡುವ ಬನ್ನಿ ಸೇವಾ ವ್ರತವ ತೊಡುವ ಬನ್ನಿ || ಪ || ಹೃದಯ ಹೃದಯಕೆ ಬೆಸುಗೆಯ ಹಾಕುವ ಅಸ್ಥಿರ ಬದುಕನು ಸಾರ್ಥಕಗೊಳಿಸುವ ನೊಂದು ಬೆಂದವರ ತೊಂದರೆ ನೀಗುವ ಎಲ್ಲೆಡೆ ಸ್ನೇಹದ ಲತೆಯನು ಬೆಳೆಸುವ || 1 || ಉನ್ನತ ಪದವಿಯ ಗೊಂದಲವಿಲ್ಲ ಧನಕನಕವೇ ಇಲ್ಲಿ ಪ್ರಧಾನವಲ್ಲ ಜಾತಿ ವರ್ಣವನು ಕೇಳುವುದಿಲ್ಲ ರೂಪಕೆ ಧೂಪವ ಹಾಕುವುದಿಲ್ಲ || 2 || ಅಂತರಂಗದಾ ಸಿರಿ ಹೊಂದಿರಬೇಕು ಅಂತರ ತೋರದ ಆಂತರ್ಯ ಬೇಕು ನಾನೆಂಬುದನು ಕಡೆಗಾಣ ಸಬೇಕು ತನುಮನದಲಿ ಬಲವುಕ್ಕಲೇ […]
ತಂದೆನಯ್ಯಾ ತಮ್ಮಾ ತಂದೆನಯ್ಯಾ ಸ್ನೇಹದ ಹಸ್ತವ ಪ್ರೀತಿಯ ಹೃದಯವ || ಪ || ಮಾರು ದೂರ ಇದ್ದುಕೊಂಡು ಸಂಘವನ್ನು ಹಳಿಯಬೇಡ ತನ್ನನ್ನೇ ತಿದ್ದಿಕೊಂಡು ಓಡಿಬಂದು ಕರ್ಮವ ನೋಡ ನೋಡಿದಲ್ಲಿ ಮರೆವೀ ನೀನು ತಂತನವನು ತಮ್ಮಾ || 1 || ಹೆದರಿ ಹೆದರಿ ಸರಿಯಬ್ಯಾಡ ಉದುರಿ ಉದುರಿ ಹೋಗಲು ಬ್ಯಾಡ ಹೇಡಿತನವ ಬಿಟ್ಟು ತಮ್ಮಾ ಧೈರ್ಯತನವ ತಂದು ಮುಂದು ವೀರಭದ್ರನಾಗು ತಮ್ಮಾ ಭದ್ರನಾಗಿರು || 2 || ಮನಸ್ಸಿನ ಭೇದವ ಬಿಟ್ಟು ಕನಸಿನ ರೋಷವ ಕಟ್ಟು ಕನಸು ಮನಸು […]
ಜಯ ಜಯ ಜಯ ಜನ್ಮಭೂಮಿ ಜಯ ಜಯ ಜಯ ಮಾತೃಭೂಮಿ || ಪ || ಆಕಾಶಗಂಗೆ ಇಳಿದು ಬಂದ ಭೂಮಿ ಶ್ರೀ ಕೃಷ್ಣಗೀತೆಯ ಅಮೃತವಿತ್ತ ಭೂಮಿ || ಅ.ಪ || ಸ್ನೇಹದ ಕುಸುಮಮಾಲೆ ಧರಿಸಿದ ಭೂಮಿ ತ್ಯಾಗಿಗಳು ಜನಿಸಿರುವ ಪಾವನ ಭೂಮಿ ವೇದಾಂತ ಸಾರ ವಿಹಾರ ಪುಣ್ಯಭೂಮಿ ಭಾರತಭೂಮಿ ಭಾಸುರಭೂಮಿ || 1 || ಹೈಮಾದ್ರಿ ವಿಂಧ್ಯಗಳ ಉನ್ನತಭೂಮಿ ಕಾವೇರಿ ಗಂಗೆಗಳು ಹರಿಯುವ ಭೂಮಿ ವೇದಾಂತ ಸಾರ ವಿಹಾರ ಪುಣ್ಯಭೂಮಿ ಭಾರತಭೂಮಿ ಭಾಸುರಭೂಮಿ || 2 ||
ಭಾರತಿಯು ಇರಬೇಕು ಅನುದಿನ ಸಸ್ಯಸ್ಯಾಮಲೆಯಾಗುತ ಹಸಿರು ಹೊನ್ನಿನ ಬೆಲೆಯನರಿಯಲಿ ಜನತೆಯಾಗಲಿ ಜಾಗೃತ || ಪ || ತುಂಬಿ ನಿಲ್ಲಲಿ ತುಂಬ ಗಿಡಮರ ಬಿಂಬಿಸಲಿ ವನಸಿರಿಯನು ಕಂಪನೊಯ್ಯಲು ಪವನ, ಮಳೆಹನಿ ತಂಪುಗೈಯಲಿ ನೆಲವನು || 1 || ಬೆಳೆಯು ಬೆಳೆಯಲಿ ಇಳೆಯು ಬೆಳಗಲಿ ಕಳೆಯ ನಗುಮೊಗ ತೋರಲಿ ಒಸರು ಹೊರಡಲಿ ಹಸಿರು ಹರಡಲಿ ಹೊಸತು ಉಸಿರಲಿ ಹಾಡಲಿ || 2 || ಮರುಳು ಮಾಡುತ ವನವ ಕೆಡವುತ ಮರಳುಗಾಡನು ತರುವರೇ? ಮರಳಿಬಾರದು ಭೂಮಿ, ಅರಳದು ತಿರುಳು ತೀರಲು, ತಿಳಿಯರೇ? […]
ಒಂದ ದಿನ ಸಂಜೆಯ ಹೊತ್ತಿನಲಿ ಹೊರಬಿದ್ದೆನು ನಮ್ಮೂರ ಹಾದಿಯಲಿ ನಮ್ಮೂರ ಶಾಲೆಯ ಅಂಗಳದಲ್ಲಿ ಕಂಡರು ಕೆಲ ಬಾಲಕರು ಕಾವಿಧ್ವಜದಡಿ || ಪ || ಬಾಲಕರು ಆಡುತ್ತಿದ್ದ ಆಟದ ಮೋಡಿ ನಿಲ್ಲಿಸಿತು ನನ್ನ ಅಲ್ಲೇ ಗೆಳೆಯರ ಕೂಡಿ ಹಾಡುತ್ತಿದ್ದ ದೇಶಭಕ್ತಿ ಹಾಡಿನ ಹೊನಲು ಕೇಳುತಲಿ ನಿಂತೆ ಕಡೆಗೆ ಪ್ರಾರ್ಥನೆ ಸಾಲು || 1 || ಹೊರಬಿದ್ದ ಹುಡುಗರ ಆ ಗುಂಪಿನ ಗೆಳೆಯ ನನ್ನ ಬಳಿ ಬಂದು ಕೇಳಲೆನ್ನ ಪರಿಚಯ ಎನಗವರ ಅವರಿಗೆನ್ನ ಪರಿಚಯವಾಗೆ ದಿನನಿತ್ಯ ಹೋಗುತ್ತಿದ್ದೆ ಶಾಖೆಯ ಕಡೆಗೆ […]
ಶಾರದೆಯ ಸದನವಿದು ರಾಷ್ಟ್ರದೀಕ್ಷೆಯ ಭವನ ಪೂರ್ಣತೆಯ ಪಥಿಕನಿಗೆ ದೀಪಗಂಬ ತನ್ನರಿವ ತಾ ಗಳಿಸಿ ರಾಷ್ಟ್ರದುನ್ನತಿ ಬಯಸಿ ಮುನ್ನಡೆವ ಸಾಧಕನ ಸ್ಫೂರ್ತಿ ಬಿಂಬ || ಪ || ಲೋಕ ಹಿತದಾಶಯದ ಋಷಿತುಲ್ಯ ಸಾಧಕರ ಕಲ್ಪನೆಯ ಕುಸುಮಗಳು ಅರಳಿಹವು ಇಲ್ಲಿ. ಕಾಯಿಗಳು ಮಾಗಿಹವು, ಸಫಲತೆಯ ಪಡೆದಿಹವು ದಶದಿಶೆಗೆ ಏಕತೆಯ ಬೀಜ ಚೆಲ್ಲಿ || 1 || ಶೈಶವದ ತೊದಲ್ನುಡಿಗೆ, ಬಾಲ್ಯದಾಟದ ಮನಕೆ ಹೊಸ ಶೋಧ ಕೆಳಸುತಿಹ ಯುವ ಮನಸಿಗೆ ದೇಶವೇ ಮೊದಲೆಂಬ ಸಂಸ್ಕಾರ ಕ್ಷಣಕ್ಷಣವು ಹೊಸ ದೃಷ್ಟಿ, ಹೊಸ ದಿಕ್ಕು […]
ಮೇರುಸದೃಶ ಜ್ಞಾನಿ ರಾಷ್ಟ್ರಯುಗ ದ್ರಷ್ಟಾರ ಯುಗಪುರುಷ ನೀನಾದೆ ಹೇ ಮಾಧವ || ಪ || ಅಡಿಗಡಿಗೆ ಭಾರತದ ಕೀರ್ತಿಯನು ಪಸರಿಸುವ ಯೋಜನೆಯ ರೂಪಿಸಿದ ಓ ಯೋಜಕ ಪರಮವೈಭವ ಪದಕೆ ಭಾರತಿಯನೆತ್ತರಿಪ ಮಾರ್ಗದರ್ಶಕನಾದೆ ನೀ ಮಾಧವ || 1 || ಜನಮನವನೆಚ್ಚರಿಸಿ ರಾಷ್ಟ್ರವೇ ಮೊದಲೆಂದೆ ನಾನಲ್ಲ ನೀನೆಂಬ ಕರೆ ನೀಡಿದೆ ಸ್ವಾರ್ಥವಿಲ್ಲದ ತ್ಯಾಗ ಸಾರ್ಥಕವು ಎಂದೆಂಬ ಮೌಲ್ಯವನು ಜೀವನದಿ ನೀ ತೋರಿದೆ || 2 || ಮಾತೃಋಣ ತೀರಿಸುವ ಋಣಭಾರ ಎಮಗಿಹುದು ನಿತ್ಯಸಾಧನೆಯೊಂದೆ ಸನ್ಮಾರ್ಗವೆಂದೆ ಏಕಾತ್ಮಭಾವದಲೆ ಭಾರತವ ನಿರ್ಮಿಸುವ […]
ಬಾs ಬಾರೊ ಬಾರೊ ಬಾರೊ ಬಾರೊs ಸಂಘದ ಶಾಖೆಗೆ ತಾಯಿ ಭಾರತಿಯ ಸೇವೆಗೆ || ಪ || ಸಿದ್ಧನಾಗು ದೇಶಿ ಆಟಕೆ ಉಸಿರು ಹಿಡಿದುಕೊ ಕಬ್ಬಡ್ಡಿಗೆ ಗೆಲ್ಲು ಛಲದಿ ಯೋಧನಂತೆ ಗಟ್ಟಿಯಾಗಲಿ ಶರೀರಕೆ ಆಟಗಳದಿ ಉಲ್ಲಾಸವೆದ್ದಿದೆ ಹೊಸ ಚೈತನ್ಯವು ಮೂಡಿದೆ || 1 || ಆತ್ಮರಕ್ಷಣೆಯ ಪ್ರಹಾರವು ದಿನಕರನಿಗೆ ಆಸನ ನಮನವು ಹೆಜ್ಜೆ ಹೆಜ್ಜೆ ಕೂಡಿ ನಡೆವೆವು ಶಿಸ್ತಿನ ಕ್ರಿಯೆ ಮೈತಾಳೆವು ಅಂಕತಾಳ ನಡೆಯು ಒಂದೇ ಗುರಿಯು ಒಂದೇ ನಮಗಿದೆ || 2 ||| ಹತ್ತು ಹಲವು […]
ಉಷೆ ಯಶವ ಗಳಿಸಿಹಳು ನಿಶೆ ಕುಸಿದು ಕುಳಿತಿಹಳು ಮೂಡಣದ ಆಗಸದಿ ಕೆಂಪೇರಿದೆ ಹೊಸ ಕುಸುಮವರಳುತಿರೆ ನಸು ನಗುವ ಬೀರುತಿರೆ ನಸುಕಿನಲೆ ಅಂಗಳದಿ ಕಂಪೇರಿದೆ || ಪ || ಅರಳಿರುವ ಸುಮದಲಿಹ ಅಂದ ಮಕರಂದಗಳು ಸ್ನೇಹದೊಸಗೆಯನಿತ್ತು ಬಳಿ ಕರೆದಿವೆ ಚಿಗುರೆಲೆಯ ಮರೆಯಿಂದ ಕೇಳುತಿಹ ಕೂಜನದಿ ಲೋಕಹಿತದಾಶಯವು ಮರುದನಿಸಿದೆ || 1 || ಚರಿತೆಯೊಡಲಿಗೆ ಸರಿದ ಇರುಳ ಕಗ್ಗತ್ತಲೆಯ ಕಹಿಗನಸು ನೋವುಗಳ ಕೊನೆಯಾಗಿವೆ ಮೇಲೆದ್ದು ಕೊಳೆ ತೊಳೆದು ಮಡಿಯಾದ ಯುವಜನತೆ ಧ್ಯೇಯ ತಿಲಕವ ಧರಿಸಿ ಅಣಿಯಾಗಿದೆ || 2 || […]