ಹಿಂದೂ ವೀರನೆ ನಿನ್ನೊಳು ಅಡಗಿಹ ಛಲಬಲ ಸಾಹಸ ಹೊಮ್ಮುವುದೆಂದು? ಈ ನಾಡಿನ ನರನಾಡಿಗಳಲ್ಲಿ ಕ್ಷಾತ್ರಪ್ರವಾಹವು ಉಕ್ಕುವುದೆಂದು? ಬಾ ಬಾ ನಾಡನು ಕಟ್ಟಲು ಇಂದು || ಪ || ವೀರಧನುರ್ಧರ ಆ ದಾಶರಥಿ ಚಕ್ರವ ಪಿಡಿದಿಹ ಪಾರ್ಥಸಾರಥಿ ನಿನ್ನೆದೆ ಗುಡಿಯಲಿ ಪಡಿಮೂಡಿಹರು ಅರಿವಿನ ಒಳಗಣ್ ತೆರೆಯೋ ಇಂದು || 1 || ಖಡ್ಗ ಭವಾನಿಯ ವಾರಸುದಾರ ವೀರಶಿವಾಜಿಯ ಓ ಸರದಾರ ಸಾಹಸಕಾರ್ಯಕಿದೇ ಸುಮುಹೂರ್ತ ವಿಜಯರಣಾಂಗಣದೊಳು ಧುಮುಕಿಂದು || 2 || ಕೈಜಾರಿದ ಅವಕಾಶಗಳೆನಿತೋ? ಕೈಮೀರಿದ ಸಂದರ್ಭಗಳೆನಿತೋ? ಕಳೆದಿಹ ಕಾಲವು […]
ಹನಿಯು ವಾಹಿನಿಯಾಯ್ತು ವಾಹಿನಿಯು ಜಲಧಿ ಕೇಶವನ ಛಲಧಾರಿ ಯುವಜನರ ಬಲದಿ ಸತತ ಸಾಧನೆಗೈದ ಭಾರತದ ನೆಲದಿ || ಪ || ವಿಘ್ನಕೋಟಿಯ ಗೆದ್ದು ದಾಟಿಹುದು ಸಂಘ ಅಗ್ನಿಯೊಳು ಮಿಂದು ಮೇಲೆತ್ತಿಹುದು ಶೃಂಗ ಗೈದಿಹುದು ವೈರಿಗಳ ಬಹುವ್ಯೂಹ ಭಂಗ ಪಸರಿಸಿದೆ ಸಾಹಸದ ಸಾಸಿರ ತರಂಗ || 1 || ರೂಢಿಯೊಳಗೂಡಿರುವ ಮೌಢ್ಯವನು ತೊರೆದು ಕಾಡಿರುವ ಕೇಡುಗಳ ಬೆನ್ನೆಲುಬು ಮುರಿದು ಮೂಡಿಹನು ನೋಡಲ್ಲಿ ಜಾಗೃತಿಯ ಸೂರ್ಯ ನೀಡಿಹನು ನಾಡಿದಕೆ ಕುಂದದಿಹ ಧೈರ್ಯ || 2 || ಆಂತರಿಕ ಭೇದಗಳ ಅಂತರವನಳಿಸಿ […]
ಸ್ವರ್ಗದ ಸೊಬಗನು ಮೀರಿಸಿ ಮೆರೆದಿಹ ಭಾರತದ ಅಂಗಳದಲ್ಲಿ ಕೇಶವ ಉರಿಸಿದ ಸಂಘದ ಹಣತೆಯು ಬೆಳಗಿತು ಜನಮನ ಮನದಲ್ಲಿ || ಪ || ತನ್ನೀ ನೆಲಜಲ ಧರ್ಮಸಂಸ್ಕೃತಿ ಹಿಂದೂ ಜನತೆಯು ಮರೆತಿರಲು ದಾಸ್ಯದ ಉರುಳಿಗೆ ಕೊರಳನು ನೀಡಿ ಸ್ವಾರ್ಥದ ಕೂಪದಿ ಮುಳುಗಿರಲು ಘೋರ ನಿರಾಶೆಯ ಘನ ತಿಮಿರದಿ ತಾ ಯುವ ಜನತೆಯು ಎದೆಗುಂದಿರಲು ಕೇಶವ ತೋರಿದ ಧ್ಯೇಯದ ಗಾದಿ ಅಂತಿಮ ವಿಜಯದ ಹಾದಿಯೊಳು ಮಾತೆಯ ಸೇವೆಯ ಅನುದಿನ ಮಾಡಲು ಜೀವನವನೆ ಮುಡಿಪಾಗಿಡಲು || 1 || ಭಾರತದೇಶದ ಭವ್ಯಪರಂಪರೆ […]
ಸೇವೆಯೆಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯುವಾ ಧ್ಯೇಯ ಮಹಾಜಲಧಿಯೆಡೆಗೆ ಸಲಿಲವಾಗಿ ಹರಿಯುವಾ ಲೋಕಹಿತದ ಕಾಯಕ ನಾಡಿಗಭಯದಾಯಕ ವ್ಯಕ್ತಿವ್ಯಕ್ತಿಯಾಗಲಿಂದು ನೈಜ ರಾಷ್ಟ್ರಸೇವಕ || ಪ || ಉಚ್ಚನೀಚ ಭೇದವ ಅಳಿಸಿ ದೂರಗೊಳಿಸುವಾ ರೊಚ್ಚು ರೋಷ ನೀಗುತಾ ಬಂಧು ಭಾವ ಬೆಳೆಸುವಾ ಹಚ್ಚಿ ಜ್ಞಾನದೀವಿಗೆ ಸುತ್ತ ಬೆಳಕ ಬೀರುವಾ ಕೆಚ್ಚಿನಿಂದ ಮುಂದೆ ಸಾಗಿ ಭರದಿ ಗುರಿಯ ಸೇರುವಾ || 1 || ಎಲೆಯ ಮರೆಯೊಳರಳಿ ನಗುವ ಸುಮನರಾಶಿಯಂದದಿ ಕಡಲ ಒಡಲೊಳುಕ್ಕಿ ಮೊರೆವ ಕೋಟಿ ಅಲೆಗಳಂದದಿ ವಿಮುಖರಾಗಿ ಖ್ಯಾತಿಗೆ ಪ್ರಚಾರಕೆ ಪ್ರಶಂಸೆಗೆ ಸಹಜಭಾವದಿಂದ […]
ಸೇವೆಯ ಸೇತುವೆ ಕಟ್ಟಲು ಬನ್ನಿ ವ್ಯಕ್ತಿ ಸಮಾಜದ ನಡುವೆ ನಾಡದೇವತೆಗೆ ಅರ್ಪಿಸಬನ್ನಿ ತನುಮನಧನಗಳ ಒಡವೆ || ಪ || ಸೇವೆಯೆ ತತ್ವದ ಸಾರವು ನಿಜದಿ ಸೇವೆಯೆ ಜೀವನ ಧರ್ಮ ಸ್ವಾರ್ಥದುರಾಶೆಯ ನೀಗಿಸಿ ಬಾಳನು ಸಾರ್ಥಕಗೊಳಿಸುವ ಮರ್ಮ ಕಂಗೆಡಿಸುವ ಕಗ್ಗತ್ತಲಕೂಪದಿ ಸೇವೆಯೆ ದಾರಿದೀಪ ದುಃಖಿತ ಜನತೆಯ ಕಂಬನಿಯೊರೆಸುವ ಕರುಣೆಯ ಮಾತೃಸ್ವರೂಪ || 1 || ಅಕ್ಷರವಿದ್ಯೆಯ ಕಲಿಸಿ ನಿರಕ್ಷುರಕುಕ್ಷಿಗಳಿಗೆ ಒಲವಿಂದ ಅಕ್ಷಯ ರಕ್ಷಣೆ ನೀಡುತ ಶೋಷಿತ ಜನತೆಗೆ ಛಲಬಲದಿಂದ ಕಾರ್ಪಣ್ಯದ ಘಟಸರ್ಪದ ದರ್ಪವ ಮುರಿಯಲು ಸೇವೆಯೆ ಮಾರ್ಗ ತ್ಯಾಗ […]
ಸುತ್ತಮುತ್ತಲು ಅಂಧಕಾರ ಉರಿಯುತಿತ್ತು ಹಣತೆಯೊಂದು ಬೆಳಕು ಹೊಮ್ಮಿತು ತಮವು ಅಳಿಯಿತು ಪುಳಕಗೊಂಡನು ಹಿಂದು ಹಿಂದು || ಪ || ಬರದ ಬೇಗೆಗೆ ಭುವಿಯ ಬೆಂದಿರೆ ಚಿಮ್ಮುತಿತ್ತು ಚಿಲುಮೆಯೊಂದು ದಾಹ ನೀಗಿತು ಧಾರೆ ಹರಿಯಿತು ಆಯಿತದುವೇ ಶಕ್ತಿಸಿಂಧು || 1 || ದೈತ್ಯ ಶಕ್ತಿಯ ಚಂಡಮಾರುತ ಬೀಸುತಿತ್ತು ಭರದೊಳಂದು ತತ್ತರಿಸದೆಯೆ ಎತ್ತರಿಸಿ ತಲೆ ಸಸಿಯು ಹೆಮ್ಮರವಾಯಿತಿಂದು || 2 || ದೈನ್ಯದಾಸ್ಯದ ವಿಕಟಹಾಸ್ಯಕೆ ನಡುಗುತಿತ್ತು ದೇಶವಂದು ಸ್ವಾಭಿಮಾನದ ಐಕ್ಯಬಲದಿಂ ಎದ್ದು ನಿಂತಿದೆ ರಾಷ್ಟ್ರವಿಂದು || 3 || ಘನ […]
ಸಾಮರಸ್ಯದ ನವ್ಯಯುಗಕೆ ನಿಮಗಿದೋ ಆಮಂತ್ರಣ | ಕಣ್ಣತೆರೆದು ಭ್ರಮೆಯ ತೊರೆದು ನೀಡಿ ಹಾರ್ದಿಕ ಸ್ಪಂದನ ಮಾಡಿ ಸೀಮೋಲ್ಲಂಘನ || ಪ || ಭರತ ಭೂಮಿಯ ಚರಿತೆಯೊಡಲಲಿ ಅಡಗಿದೆ ಕಥೆ ಸಾವಿರ ಮಡಿಲ ಮಕ್ಕಳ ಸೋಲುಗೆಲುವಿನ ನೋವು ನಲಿವಿನ ಹಂದರ ಪ್ರಗತಿ ಪತನದ ಕಥನ ಮಥನದಿ ಸತ್ಯವಾಗಲಿ ಗೋಚರ ಮತ್ತೆ ಮೂಡಲಿ ಭಾಸ್ಕರ || 1 || ಖಡ್ಗಬಲದಿಂ ಕುಟಿಲತನದಿಂ ನಡೆಯಿತಿಲ್ಲಿ ಮತಾಂತರ ಒಂದೆ ನೆತ್ತರ ಬಂಧುಗಳಲಿ ಹಗೆಯ ವಿಷಬೀಜಾಂಕುರ ಒಡೆದು ಆಳುವ ಕಪಟ ನೀತಿಯು ತಂದಿತೋ ಗಂಡಾಂತರ […]
ಸದಾ ಮೊಳಗುತಿರಲಿ ದುಂದುಭಿಯ ಘೋಷ ಪ್ರತಿನಿಧಿಸಿ ಪ್ರತಿಧ್ವನಿಸಿ ದಿಗ್ವಿಜಯದಾಶಾ || ಪ || ಪಾಂಡುರಂಗನಖಂಡ ಪಾಂಚಜನ್ಯದ ಧ್ವನಿಗೆ ಪಾಂಡವರ ಗುಂಡಿಗೆಯು ಗರಿಗೆದರಿದಂತೆ ಚಂಡಿ ಚಾಮುಂಡಿಯರ ಅಟ್ಟಹಾಸವ ಕಂಡು ಭಂಡ ರುಂಡಗಳಂದು ಧರೆಗುರುಳಿದಂತೆ || 1 || ಪ್ರಳಯರುದ್ರನ ಡಮರು ವಾದನದ ಸ್ಪಂದನದಿ ತಾಂಡವದ ತಾಳಲಯ ರೂಪುಗೊಂಡಂತೆ ಸ್ವರ್ಗದಿಂ ಧುಮ್ಮಿಕ್ಕಿ ಭೋರ್ಗರೆವ ಜಲಧಾರೆ ಜಗದಗಲ ಸಂಭ್ರಮದಿ ಹರಿದಾಡಿದಂತೆ || 2 || ಭರತಖಂಡ ಪ್ರಚಂಡ ಗಂಡುಗಲಿಗಳ ತಂಡ ಚಂಡಮಾರುತದಂತೆ ಅಪ್ಪಳಿಸಿದಾಗ ಅಖಿಲ ಭೂಮಂಡಲವೆ ಥರಥರನೆ ಕಂಪಿಸುತ ವೈರಿಕುಲ ಉದ್ದಂಡ […]
ಸಂಘದ ಸಸಿಯಿದು ಹೆಮ್ಮರವಾಗಿದೆ ಕೇಶವ ನೀನೇ ನೋಡಲು ಬಾ ಟೊಂಗೆ ಟೊಂಗೆಯಲು ಕಂಗೊಳಿಸುತಲಿಹ ಅಮೃತ ಫಲಗಳ ನೀಡಲು ಬಾ || ಪ || ಮೋಹಿತೆವಾಡದ ಅಂಗಳದಲ್ಲಿ ನೀನೇ ನೆಟ್ಟಿಹ ಸಸಿಯಂದು ಬೆಳೆಯಿತು ಭರದಲಿ ಬೆಳೆಯತಲಿಹುದು ಅಗಣಿತ ಶಾಖೆಗಳೈತಂದು ಬೆಂಗಾಡನು ರಂಗೇರಿಸಿ ಬೀಸಿತು ನವಚೈತನ್ಯದ ತಂಗಾಳಿ ದೈನ್ಯ ನಿರಾಶೆಯ ಕಾಲವು ಕಳೆಯಿತು, ಮೈಮರೆವಿನ ಪೊರೆಯನು ಸೀಳಿ || 1 […]
ಸಂಘಜನಕ ಕೇಶವಾ ಜನ್ಮತಳೆದು ಬಾರೋ ಧ್ಯೇಯಮಾರ್ಗದಲ್ಲಿ ನಮಗೆ ದಾರಿ ತೋರೋ || ಪ || ಕೆಸರ ಒಡಲಿನಿಂದ ಕಮಲ ಅರಳಿದಂತೆ ಮರಳುಗಾಡಿನಲ್ಲಿ ಹಸಿರು ಮೂಡಿದಂತೆ ನಿಶೆಯನಳಿಸಿ ಉಷೆಯು ಉದಿಸಿದಂತೆ ಸಂಘ ಜನಿಸಿತು ಬೇಗೆಯಿಂದ ಬೆಂದ ನೆಲಕೆ ಮುದದಿ ತಂಪನುಣಿಸಿತು || 1 || ನಾಡಸ್ವಾಭಿಮಾನವ ಪ್ರಶ್ನಿಸಿರಲು ದೈನ್ಯತೆ ಬಾಡಿಹೋದ ಮನಗಳ ಕಾಡುತಿರಲು ಶೂನ್ಯತೆ ಅರುಣನಂತೆ ತರುಣಜನಕೆ ತೋರಿ ಬಾಳ ಧನ್ಯತೆ ಭರತಭೂಮಿಗಭಯವಿತ್ತೆ ಸಾರಿ ಶೌರ್ಯ ಸಂಹಿತೆ || 2 || ವಿಸ್ಮೃತಿಯ ವಿಷವನು ಸ್ವಾರ್ಥದಾಮಿಷವನು ಭ್ರಷ್ಟತೆಯ ಕಸವನು […]