ಅಮ್ಮನ ಸಮವಲ್ಲವೇ ಮನುಜ ನಮ್ಮಯ ಗೋಮಾತೆ ಅಮೃತದಂತಹ ಹಾಲನ್ನುಣಿಸುವ ಪ್ರೀತಿಯ ಜಗನ್ಮಾತೆ || ಪ || ದುಷ್ಟರು ಶಿಷ್ಟರು ಭೇದವ ತೋರದೆ ಕಾಣುವಳಲ್ಲ ಮಗುವಂತೆ ಉಸಿರಿರುವನಕವು ಕೆಡುಕನು ಬಯಸದೆ ಪೊರೆಯುವಳಲ್ಲ ತಾಯಂತೆ || 1 || ಮಾತೆಯ ಸಹನೆಗೆ ಸಾಟಿಯದಾವುದು ತುಂಬಿದ ಒಡಲು ಒಲವಿಂದ ಗೋ ಒಲುಮೆಯನು ಪಡೆದು ಬದುಕಲು ಜೀವನವೇ ಬಲು ಚಂದ || 2 ||
ಭಾರತೀಯ ಹೃದಯವಿಂದು ರಾಷ್ಟ್ರ ದೇವನಾಲಯ ಯುವ ಮನಸಿನ ಭಾವದಲೆಗೆ ರಾಷ್ಟ್ರಭಕ್ತಿ ಶ್ರುತಿ ಲಯ ಕಲೆ-ಸಂಸ್ಕೃತಿ, ಕಥೆ-ಕವನದಿ ಗುರುಭಾರತ ಪರಿಚಯ ಮನುಜಕುಲದ ಉನ್ನತಿಯೇ ತರುಣ ಗಣದ ಆಶಯ || ಪ || ಅನ್ವೇಷಣೆ, ಉತ್ಖನನವು ಹೊಸ ಪುರಾವೆ ನೀಡಿದೆ ಭರತ ಭುವಿಯ ಹಿರಿಮೆಯರಿಮೆ ಹೊಸ ದಿಶೆಯನು ತೋರಿದೆ ದಿಟದ ಚರಿತೆಯರಿತು ಜಗವು ನತಮಸ್ತಕವಾಗಿದೆ ವಿದ್ವಜ್ಜನ ಸಂದೋಹದ ಮಣಿ ಮುಕುಟವು ಮಣಿದಿದೆ || 1 || ಪ್ರತಿಯೋಧನ ಎದೆಗುಂಡಿಗೆ ವಿಶ್ವಾಸದ ಆಗರ ಹೊಸ ಸಾಧನ, ನವ ಚೇತನ ಉತ್ಸಾಹದ ಸಾಗರ […]
ಜಯಜಯ ಗೋಮಾತೆ, ಅಂಬ ಜಯ ಜಯ ಗೋಮಾತೆ || ಪ || ದಿವಿಜರಿಗಾಶ್ರಯದಾತೇ,ತಾಯೇ ಋಷಿ ಮುನಿಕುಲ ಸಂಪ್ರೀತೇ ಭುವಿಯೊಳು ಕಾಣುವ ದೇವತೆ, ನೀನು ನಮಿಸುವೆ ನಿನ್ನಡಿಗೆ ತಾಯೇ ನಮಿಸುವೆ ನಿನ್ನಡಿಗೆ || 1 || ಅನುದಿನ ಸೇವೆಯ ಗೈವೆ, ತಾಯೆ ಕರುಣದಿ ನಮ್ಮನು ಪೊರೆಯೇ ವಸು ಕುವರಿಯೆ, ಆದಿತ್ಯ ಸಹೋದರಿ ರುದ್ರರ ಹಡೆದಿಹ ಮಾತೆ ನೀ ತ್ರಿಭುವನಪೋಷಿಣಿ ಮಾತೆ || 2 || ಪಾಪ ವಿನಾಶಿನಿ ತಾಯೇ, ಭವ ತಾಪ ನಿವಾರಿಣಿ ಕಾಯೇ ಕಾರುಣ್ಯದ ಖನಿ ವೈತರಣಿಯ […]
ಮತ್ತೆ ಮೂಡುತಿದೆ ಕತ್ತಲೆದೆಯಿಂದ ಪೌರುಷಮಯ ಇತಿಹಾಸ ಸತ್ತ ಬೂದಿಯಲು ಕಿಡಿಗಳ ತೆರೆಯುವ ಅನಂತತೆಯ ಚಿರಸಾಹಸ || ಪ || ಮನೆಗೆ ಕವಿದ ಇರುಳನು ತೊಳೆದು ಹಗಲ ಹಚ್ಚಿದುದೆ ಸಾಲದೆ ನೆರೆಜನ ಮೊರೆಯಿಡೆ ಕಾದಿ ಗೆಲಿಸಿದೆವು ಊರುಗೋಲಾಗಿ ಬಳ್ಳಿಗೆ || 1 || ಎಂದಿನಿಂದಲೋ ಹರಿದು ಬಂದಿರುವ ಜೀವನ ಧರ್ಮದ ಶ್ರುತಿಗೆ ಇಂದಿನ ಸ್ವರವನ್ನು ಹೊಂದಿಸಿ ಹಾಡುವ ಆಸೆ ಫಲಿಸುತಿದೆ ಬಾಳಿಗೆ || 2 || ಕಂಠ ಕಂಠದಲು ದನಿಗೊಳ್ಳುತ್ತಿದೆ ಶ್ರೀ ಸಾಮಾನ್ಯನ ಜಯಕಾರ ಮೂಲೆ ಮೂಲೆಯಲು ಮೈ […]
ರಕ್ಷೆಯನು ಕಟ್ಟುತ್ತ ಕರಪಿಡಿದು ನಡೆಯೋಣ ಒಂದಾಗಿ ನಿಲ್ಲೋಣ ರಾಷ್ಟ್ರರಕ್ಷಣೆಗಿಂದು || ಪ || ಸ್ನೇಹದ ಕಂಪನ್ನು ಪಸರಿಸುವ ರಕ್ಷೆ ನೋವ ಮರೆಸುತ ಧೈರ್ಯ ತುಂಬುವಾ ರಕ್ಷೆ ಒಡೆದ ಮನಸುಗಳ ಒಂದುಗೂಡಿಸೆ ರಕ್ಷೆ ಸಂಬಂಧಗಳನುಬಂಧ ಬೆಸೆಯುವುದೀ ರಕ್ಷೆ || 1 || ಇತಿಹಾಸ ನೆನಪಿಸಲು ಕಾಲನೇ ರಕ್ಷೆ ಗುರಿಯೆಡೆಗೆ ನಡೆಯಲು ನಕ್ಷೆಯೇ ರಕ್ಷೆ ಮೇಲುಕೀಳುಗಳ ಅಳಿಸೆ ಆಯುಧವು ರಕ್ಷೆ ಎಲ್ಲರೂ ಒಂದೆಂಬ ಭಾವವೀ ರಕ್ಷೆ || 2 || ತಾಯ ರಕ್ಷಣೆಗೆ ಸಿದ್ಧಕಂಕಣವು ರಕ್ಷೆ ರಾಷ್ಟ್ರರಕ್ಷಣೆಯ ಮನವಕೊದುವಿದಿದೋ ರಕ್ಷೆ […]
ಸಿಂಧು ಸಂಸ್ಕೃತಿಯಲ್ಲಿ ಸಿರಿ ಪರಂಪರೆಯಲ್ಲಿ ಹಿಂದು ಹೆಸರಲಿ ನಾವು ಬಂದೆವಿಳೆಗೆ ಸಂದ ಕಾಲವನೆಳೆದು ಇಂದು ಯಶ ಸಾಧಿಸಲು ಬಂದಿಹುದು ಶುಭ ಸಮಯ ನಮ್ಮ ಬಳಿಗೆ || ಪ || ಒಡೆದು ಶಂಖಧ್ವನಿಯ ಗುಡುಗು ನೂರ್ಮಡಿಗೊಂಡು ಸಿಡಿಸಿಡಿದು ಸೀಳಾಗಿ ಸ್ವೀಕರಿಪ ಮೊದಲೇ ಬಡವ ಅಂತ್ಯಜರೆಂಬ ತಡೆಗೋಡೆಗಳು ಬೆಳೆದು ದುಡುಕಿ ವಿಷನಾಗಗಳು ಫೂತ್ಕರಿಪ ಮೊದಲೇ ಹುಡುಕಿ ಓರೋರ್ವರನು ನಿಜವಿಕಾಸಕೆ ತರಲು || 1 || ವಿಸ್ಮೃತಿಯ ಕರಿಮುಗಿಲು ಪ್ರಗತಿಪಥವನು ಕವಿದು ಪಶ್ಚಿಮಕೆ ಸೋತವರ ಅನುಸರಿಸದೇ ಆತ್ಮರತಿಯಲಿ ಮುಳುಗಿ ಆರ್ತರನು ಕಡೆಗಣಿಸಿ […]
ಹಿಂದು ಸಾಗರವೆ ದೆಸೆಯ ಬದಲಿಸಿದೆ ಏನಿದೆಂಥ ಮೋಡಿ ಉಕ್ಕಿ ಮೊರೆಯುತಿವೆ ಕೋಟಿ ಅಲೆಗಳು ತಾಯಿ ಸ್ತುತಿಯ ಪಾಡಿ ವೀರ ಸಂತತಿಯ ಆವೇಶ ತನುಗಳಲಿ ಪುಡಿ ಪುಡಿಯು ಎಲ್ಲಾ ಬೇಡಿ ಬಿಂದು ಬಿಂದುವೂ ಇಂದು ಒಂದೆನುವ ಒಮ್ಮತವೆ ಜೀವನಾಡಿ || ಪ || ಇರುಳ ಸರಿಸುತಾ ಬಂದ ಬೆಳಗಿಂದು ಒಸಗೆ ತಂದಿಹಳು ಇಳೆಗೆ ವಿಶ್ವ ಮುಕುಟದ ಸರದಿ ಮೀಸಲು ತಾಯಿ ಭಾರತಿಯ ಶಿರಕೆ ಜಡತೆ ಝಾಡಿಸಿ ಛಲದಿಂದ ದುಡಿಯುವ ದಿಟ್ಟ ಹೃದಯಗಳ ಹರಕೆ ದುರುಳರೆದೆಗಳ ಸೀಳಿ ಮಾತೆಗೆ ಜಯಮಾಲೆ […]
ಬಡತನದ ಬೇಗೆಯಲಿ ಬೇಯುತಿಹ ಬಂಧುಗಳ ಬಾಳಿನಲಿ ಬೆಳದಿಂಗಳೆನಿಸಬೇಕು ಭಾರತೀಯರ ಭಾವ ಭಿನ್ನತೆಯ ಬದಿಸರಿಸಿ ಬಂಧು ಭಾವದೊಳವರ ಬೆಸೆಯಬೇಕು || ಪ || ಬವಣೆ,ಬೇಗುದಿಯಳಿಸಿ, ಬೇನೆ, ಬೇಸರವಳಿಸಿ ಬಧಿರತನದುರುಳಿಂದ ಬೇರ್ಪಡಿಸಬೇಕು ಬಡಿವಾರ ಬದಿಗಿರಿಸಿ ಬಂಧುಗಳ ಬರಸಳೆದು ಬಿಗಿದಪ್ಪಿ ಭಾವಗಳ ಬೆಸೆಯಬೇಕು || 1 || ಬೆಳಕಿನೆಡೆ ಬರಮಾಡಿ ಬಲದೊಲವನೀಯುತ್ತ ಭರವಸೆಯ ಬೀಜವನು ಬಿತ್ತಬೇಕು ಬಡವ ಬಲ್ಲಿದರೆಂಬ ಭೇದ ಬದನಿಕೆಯಳಿಸಿ ಭಾರತದ ಬೇರುಗಳ ಬೆಳೆಸಬೇಕು || 2 || ಬವರದಲಿ ಬಲಿದಾನವಾಂತವರ ಬಯಕೆಯೊಲು ಭವ್ಯ ಭಾರತವನ್ನು ಬಲಿಯಬೇಕು ಭೂಮಾತೆಯಣುಗರಲಿ ಭೂಮಿ […]
ಉರಿಸೋ ಧ್ಯೇಯದೀಪ, ಜನಮನದ ಆಳದಲ್ಲಿ ಹರಿಸೋ ಅಮೃತಧಾರಾ, ವಿಷಮಯ ಪಾತಾಳದಲ್ಲಿ || ಪ || ದೀನ ದಲಿತ ಜನರ ಜೊತೆಗೂಡಿ ಸಾಗು ಮುಂದೆ ಒಂದೇ ತಾಯಿ ನೆಲವು ನಮ್ಮೆಲ್ಲ ಗುರಿಯು ಒಂದೆ ತೆರೆಸೋ ಹೃದಯದ್ವಾರ ವಿಭ್ರಾಂತ ಜನಗಳಲ್ಲಿ ಹರಿಸೋ ಸ್ನೇಹಪೂರ ಭ್ರಮೆಯಾಂತ ಮನಗಳಲ್ಲಿ || 1 || ಶಿಲೆಯು ಕಲೆಯಧರಿಸಿ ಇತಿಹಾಸ ಒರೆಯುತಿಹುದು ಹಿಂದೂ ಜನತೆಯಿಂದು ನಾಡನ್ನೆ ಮರೆಯುತಿಹುದು ಮೆರೆಸೋ ರಾಷ್ಟ್ರಧ್ವಜವ ಉನ್ನತಿಯ ಬಾನಿನಲ್ಲಿ ಸ್ಮರಿಸೋ ನಾಡ ಹಿರಿಮೆ ಅನುದಿನವೂ ಬಾಳಿನಲ್ಲಿ || 2 || ಬಲವ […]
ಸೇವಾ ಗಂಗೆಯಲಿ ಮಿಂದೆದ್ದು ಸೇವಾ ತುಂಗಾ ಪಾನವ ಗೈದು ಸೇವಾವ್ರತವನು ಪಿಡಿಯೋಣ ಸೇವಾಕಾರ್ಯದಿ ಧುಮುಕೋಣ ಸೇವಾ ಹಿ ಪರಮೋಧರ್ಮಃ || ಪ || ವಿಶ್ವವನಾವರಿಸಿಹ ಕಗ್ಗತ್ತಲ ಒಮ್ಮನದಲಿ ಬದಿಗೊತ್ತೋಣ ಧೈರ್ಯವ ತುಂಬುತ ಪ್ರತಿ ಮನದಲ್ಲೂ ಆತ್ಮವಿಶ್ವಾಸವ ಭರಿಸೋಣ ಧೈರ್ಯಂ ಸರ್ವತ್ರ ಸಾಧನಂ || 1 || ವೈದ್ಯರಂತೆ ಕಾಯಕ ಮಾಡಿ ಕಾಯಕ ಕೈಲಾಸವೆನ್ನೋಣ ದಾದಿಯರಂತೆ ಸೇವಾಕಾರ್ಯದಿ ಅನುದಿನ ಅನುಕ್ಷಣ ತೊಡಗೋಣ ವೈದ್ಯೋ ನಾರಾಯಣೋ ಹರಿಃ || 2 || ತೋರಿಕೆ ಬೇಡ ಸಮರ್ಪಣೆ ಇರಲಿ ಅಂತ:ಚಕ್ಷುವು ತೆರೆದಿರಲಿ […]