ಮನುಕುಲದೇಳಿಗೆ ಸಾಧಿಸ ಹೊರಟೆವು

ಮನುಕುಲದೇಳಿಗೆ ಸಾಧಿಸ ಹೊರಟೆವು ಪ್ರಭಾತ ಕಿರಣಗಳರಳಿಸುತ ಶೋಷಿತ ಪೀಡಿತ ದಲಿತ ಜನಾಂಗದ ಭಾಗ್ಯೋದಯವನು ನಿರ್ಮಿಸುತಾ || ಪ || ಮೈ ಬೆವರಿನ ಜಲಪಾತವ ಧುಮುಕಿಸಿ ಹೊನ್ನನು ಸೃಜಿಪೆವು ಮಣ್ಣಿನಲಿ ಕಗ್ಗಲ್ಲೊಳು ಸುರಪ್ರತಿಮೆಯ ನಿರ್ಮಿಸಿ ಹೂವರಳಿಸುವೆವು ಮುಳ್ಳಿನಲಿ ಸತತ ಪರಿಶ್ರಮ ಸುರಿಸುತ ನಡೆವೆವು ವೈಭವ ಶಿಖರಕೆ ಧಾವಿಸುತಾ || 1 || ಯಾರೊಬ್ಬರ ಬಾಯ್ತುತ್ತನು ಕಸಿವುದು ಸಲ್ಲದು ಬೇಕಿಲ್ಲವು ನಮಗೆ ನ್ಯಾಯಕೆ ನೀತಿಗೆ ಹೋರಾಡುತಲಿರುವೆವು ನಾವ್ ಕಡೆಯುಸಿರಿನವರೆಗೆ ನಮ್ಮಯ ಹಿತವನು ಪರಹಿತದೊಂದಿಗೆ ಬೆಸೆವೆವು ಸಮರಸ ಸಾಧಿಸುತ || 2 […]

Read More

ತಾಯೇ ವಂದಿಸುವೆ (ವಂದೇ ಮಾತರಂ ಗೀತೆಯ ಭಾವಾನುವಾದ)

ತಾಯೇ ವಂದಿಸುವೆ ಜಲಭರಿತೆ ಫಲಭರಿತೆ ತೆಂಕಣದ ತಂಬೆಲರ ಸರಿತೆ ಸೊಂಪಿಡಿದ ಪೈರು ಪಚ್ಚೆಯ ತವರ್ಮನೆಯೆ ಹೇ ತಾಯೆ ! ಬೆಳ್ದಿಂಗಳಲಿ ಮಿಂದು ಮಿರುಗುವಿರುಳನುಟ್ಟವಳೆ ಹೂ ಚಿಗುರು ಮುಡಿದ ತರುಲತೆಗಳನೆ ತೊಟ್ಟವಳೆ ಇನಿನಗೆಯ ಜೇನ್‍ದನಿಯ ಸುಖದಾತೆ ವರದಾತೆ ಹೇ ಮಾತೆ! ಕಂಠಕೋಟಿಯ ಸಿಂಹಗರ್ಜನೆ ಸಿಡಿಸಿ ಬಾಹುಕೋಟಿಯ ಶಸ್ತ್ರಚಾಲನೆ ನಡೆಸಿ ರೌದ್ರರೂಪವ ತಳೆವ ಭೈರವಿಯೆ ನೀನು ಅಬಲೆಯೆ ತಾಯೆ ? ಸರ್ವಬಲ ಸಂಪನ್ನೆ ಶರಣು ಅಭಯಾವರಣೆ ವೈರಿಕುಲಧ್ವಂಸಿನಿಯೆ, ತಾಯೆ ! ನೀ ವಿದ್ಯೆ ನೀ ಧರ್ಮ ನೀ ಹೃದಯ ನೀನಾತ್ಮ […]

Read More

ಓ ನನ್ನ ಚೇತನ (ಶ್ರೀ ಕುವೆಂಪು)

ಓ ನನ್ನ ಚೇತನ ಆಗು ನೀ ಅನಿಕೇತನ ರೂಪ ರೂಪಗಳನು ದಾಟಿ ನಾಮ ಕೋಟಿಗಳನು ಮೀಟಿ ಎದೆಯ ಬಿರಿಯೆ ಭಾವದೀಟಿ ಓ ನನ್ನ ಚೇತನ ನೂರು ಮತದ ಹೊಟ್ಟ ತೂರಿ ಎಲ್ಲ ತತ್ತ್ವದೆಲ್ಲೆ ಮೀರಿ ನಿರ್ದಿಗಂತವಾಗಿ ಏರಿ ಓ ನನ್ನ ಚೇತನ ಎಲ್ಲಿಯೂ ನಿಲ್ಲದಿರು ಮನೆಯನೆಂದು ಕಟ್ಟದಿರು ಕೊನೆಯನೆಂದು ಮುಟ್ಟದಿರು ಓ ಅನಂತವಾಗಿರು ಓ ನನ್ನ ಚೇತನ ಅನಂತ ತಾನ್ ಅನಂತವಾಗಿ ಆಗುತಿಹನೆ ನಿತ್ಯಯೋಗಿ ಅನಂತ ನೀ ಅನಂತವಾಗು ಆಗು ಆಗು ಆಗು ಆಗು ಓ ನನ್ನ […]

Read More

ನಾಡದೇವಿಯ ಆರಾಧನೆ

ನಾಡದೇವಿಯ ಆರಾಧನೆ, ಸುತ ಕೋಟಿ ಧನ್ಯತೆ ಅಭಿವಂದನೆ ಮಾನಸ ಸರಸಿನ ಭಾವಕಮಲ, ಅರಳಿ ತಳೆದ ಪರಿಕಲ್ಪನೆ || ಪ || ಭಾಷೆ ಬೇರೆ, ವೇಷ ಬೇರೆ, ವೃತ್ತಿ ಬೇರೆ, ಪ್ರವೃತ್ತಿ ಬೇರೆ ಅಂಗುಲಂಗುಲ ನೆಲದಾ ಮತಿಯ, ಕೃತಿ ಸಂಸ್ಕೃತಿಯ ಗತಿಯು ಬೇರೆ ಉಸಿರಿನ ಪ್ರಾಣ ಗಾಳಿಯು ಒಂದೇ, ಹಸುರಿನ ಜೀವ ನೆಲ ಜಲ ಒಂದೇ ಹರಿಯುವ ರಕ್ತದ ಕಣಕಣ ಒಂದೇ, ನಾಡ ದೇವಿಯ ಪೂಜೆಗೆ ಸಮರಸ ಮಂತ್ರ ಸುಮಾರ್ಚನೆಯೊಂದೇ || 1 || ಅಳಿಸುವ ಅಸಮತೆ ಗಳಿಸುವ […]

Read More

ಹೃದಯವನರಳಿಸಿ ಜಗವನೆ ಬೆಳಗುವ

ಹೃದಯವನರಳಿಸಿ ಜಗವನೆ ಬೆಳಗುವ ಸಂಕಲ್ಪಗಳವತರಿಸುತಿವೆ ಸಂಕ್ರಮಣಕೆ ತಹತಹಿಸುತಿವೆ || ಪ || ಶೋಧಿಸಿ ಸೋಲಿನ ಮೂಲಗಳ ಭೇದಿಸಿ ನೂರು ಸವಾಲುಗಳ ಛೇದಿಸಿ ಛಲವ ಪ್ರಚೋದಿಸಿ ಬಲವ ಸಾಧಿಸಿ ತರುವೆವು ಜಯದೊಲವ || 1 || ಸಮರಸತೆಯ ಚಿರ ಸಂದೇಶ ಬಾಳಿದ ಹಿರಿಯರ ಆದರ್ಶ ಮರಳಲಿ ಧರೆಗೆ ಕಾಲದ ಕರೆಗೆ ಕರಗಲಿ ಭ್ರಮೆಯ ಕರಾಳ ಹೊಗೆ || 2 || ಪುಟಿದೇಳಲಿ ನೆಲದಭಿಮಾನ ಪುಟಗೊಳ್ಳಲಿ ತಾರುಣ್ಯಧನ ರಕ್ತದ ಕಣಕಣ ಸುರಿಯೆ ಸಮರ್ಪಣ ಶಕ್ತಗೊಳಲಿ ಸುತ ಜಾಗರಣ || 3 […]

Read More

ಹೂ ಹರೆಯದ ಹೊಂಗನಸುಗಳೆ

ಹೂ ಹರೆಯದ ಹೊಂಗನಸುಗಳೆ ಏಳಿ ಏಳಿ ಎಚ್ಚರಾಗಿ ಕನಸು ಕಂಗಳೆ ಕತ್ತಲೆಗಿದು ಸಾವು ಸುತ್ತಲು ಮುಂಜಾವು ಕರೆವಳುಷಾದೇವಿ ಮಂಗಳೆ ಸುಮಂಗಳೆ ಎಚ್ಚರಾಗಿ ಕನಸು ಕಂಗಳೆ || ಪ || ನೋವಿನಿರುಳು ನರಳಿ ನರಳಿ ಸರಿದಿದೆ ನಗುವು ನಲಿವಿಗಾಗಿ ಕದವ ತೆರೆದಿದೆ ಸೂತ್ರಬದ್ಧ ಕಾರ್ಯ ನಮ್ಮ ಎದುರಿದೆ ಲೋಕ ನಮ್ಮ ನಿಲುವಿಗಾಗಿ ಕಾದಿದೆ ಅಬಲ ಶಕ್ತಿಯಲ್ಲ, ಸಬಲರು ನಾವೆಲ್ಲಾ ಹಗಲಿಗರಳಬೇಕು ನೈದಿಲೆ || 1 || ಹುಲಿಯ ಮಣಿಸಿ ಹಲ್ಲೆಣಿಸಿದ ಭರತ ಬಲ ಚಕ್ರವ್ಯೂಹ ಮುರಿದಾ ಅಭಿಮನ್ಯು ಛಲ […]

Read More

ಹುಡುಕುವ ಬಳ್ಳಿ ಹರಿದಾಡಿ

ಹುಡುಕುವ ಬಳ್ಳಿ ಹರಿದಾಡಿ ಬಂದು ಕಾಲ ತೊಡರಿದ್ಹಾಂಗ ಬಯಸಿದ ಮುಕುಟ ಬೆಳಗಾಗ ಬಂದು ಶಿರವನಡರಿದ್ಹಾಂಗ ಅಖಂಡ ತಾಯಿಯ ಕನಸು ಕಲ್ಪನೆಯ ಸಾಕಾರದ ಸುಗ್ಗಿ… ಬಂತೇ ತಾನಾಗಿ || ಪ || ಪಂಜಾಬದಿ ನೋಡ, ಮಂಜು ಮುಸುಕಿದ ಮೋಡ ಪಂಜಾಬದಿ ನೋಡ ಸಂಜೆಯಿಂದ ಮರುಸಂಜೆಯ ತನಕ ಕೊಲ್ಲತಾರ ಸುದ್ದಿ ಹಂಚಿಕೆ ಹಾಕಿ ದೇಶವ ಮುರಿಯಲು ಮಾಡತಾರ ಬುದ್ಧಿ ನಾಡಿಗೆ ತಂದರು ಕೇಡ, ಇದು ಪಾಕಿಯ ಕೈವಾಡ ಪಾಕಿ ಬರಲವರ ಕುಟ್ಟಿ ನೆತ್ತಿಯಾ ಮೆಟ್ಟಿ, ಗಡಿಯ ಹೊರಗಟ್ಟಿ ಈ ನಾಡ […]

Read More

ಹಿಂದುತ್ವದ ಜಯಘೋಷವ ಮೊಳಗಿಸಿ

ಹಿಂದುತ್ವದ ಜಯಘೋಷವ ಮೊಳಗಿಸಿ ನಾಡನು ಜಾಗೃತಗೊಳಿಸೋಣ ಗ್ರಾಮ ನಗರ ಗಿರಿ ಕಾನನದಲ್ಲಿ ಸಾತ್ವಿಕ ಬೆಳಕನು ಬೀರೋಣ ಪುನರಪಿ ದಿಗ್ದೆಸೆಯಲಿ ಪುರುಷಾರ್ಥದ ಕಲ್ಪನೆ ತೆರೆತೆರೆ ವ್ಯಾಪಿಸಲಿ ಪಲಾಯನಕಿನಿತೂ ಆಸ್ಪದವಿಲ್ಲ ಪಾರ್ಥಸಾರಥಿಯ ನಾಡಿನಲಿ || ಪ || ಭಾಷೆಯು ವೇಷವು ಎಲ್ಲವು ಭಿನ್ನ ಆದರು ಬದುಕು ಏಕರಸ ಸಾವಿರ ವರ್ಷದ ಸಮರ ವಿಜೇತ ಪಾವನ ಹಿಂದೂ ಜೀವರಸ ಸಂಘರ್ಷದ ಸಮರಾಂಗಣದಲ್ಲಿ ಮೂಡುತಲಿದೆ ನವ ವಿಶ್ವಾಸ ಗ್ರಾಮ ಗ್ರಾಮಕೂ ಪ್ರತಿಹೃದಯಕ್ಕೂ ಹಿಂದೂ ರಾಷ್ಟ್ರದ ಸಂದೇಶ || 1 || ಜಾತಿಮತಗಳ ಧನಿಕ […]

Read More

ಹಿಂದುತ್ವದ ಒಡಲಾಳದ ಬೆಂಕಿಯೆ

ಹಿಂದುತ್ವದ ಒಡಲಾಳದ ಬೆಂಕಿಯೆ ಜಡತೆಯ ತೊರೆದು ಸಿಡಿದೇಳು ಶತಶತಮಾನದ ಕಡು ಅಪಮಾನದ ಅವಶೇಷಂಗಳ ದಹಿಸೇಳು… ಮುಗಿಲನು ಚುಂಬಿಸಿ ಭುಗಿಲೇಳು ಸತ್ಯಮೇವ ಜಯತೇ… ಶೌರ್ಯಮೇವ ಜಯತೇ || ಪ || ನಿನ್ನಯ ಪೌರುಷಮಯ ಇತಿಹಾಸ ಸ್ಮರಿಸದೆ ಮೈಮರೆತಿದೆ ಈ ದೇಶ ಪ್ರಕಟಗೊಳ್ಳು ನೀ ಪ್ರಜ್ವಲಿಸುತಲಿ ಬೆಳಗಲಿ ಭುವಿ ತವ ಪ್ರಖರ ಪ್ರಕಾಶ || 1 || ತುಷ್ಟೀಕರಣವ ಪುಷ್ಟೀಕರಿಸುವ ತಾರತಮ್ಯಯುತ ಧೋರಣೆಯು ಕಪಟ ಮತಾಂತರ ಕುಟಿಲ ಅವಾಂತರ ರಾಷ್ಟಾಂತರಕಿದು ಪ್ರೇರಣೆಯು || 2 || ಸಂಘ ಶಕ್ತಿಯ ನೀ […]

Read More

ಹಿಂದುತ್ವದ ಅವತಾರ

ಹಿಂದುತ್ವದ ಅವತಾರ ಆಗಿದೆ ಇಲ್ಲಿ ಸಾಕಾರ ಹಿಂದುಗಳನ್ನು ಸಂಘಟಿಸಿ ಸಜ್ಜನ ಶಕ್ತಿಯನೆಚ್ಚರಿಸಿ ಅಧರ್ಮವನಳಿಸಿ ಧರ್ಮವನುಳಿಸಲು ಆಗಿದೆ ಸಾಕಾರ || ಪ || ಪ್ರಾಂತ ಭಾಷೆಗಳು ಹಲವಾರು ಜಾತಿಪಂಥಗಳು ನೂರಾರು ವಿವಿಧತೆಯಲ್ಲಿನ ಏಕತೆ ಸಾರುವ ಹಿಂದುಗಳಾಗಿ ಬಂದಿಹರು ಅಶಕ್ತ ಬಿಂದುಗಳು ಸೇರಿ ಮೆರೆಯುತಿರೆ ಶಕ್ತ ಸಿಂಧುವಿನ ರೂಪದಲಿ ಹಿಂದುತ್ವದ ಹೆದ್ದೆರೆಯಲ್ಲಿ || 1 || ಧರ್ಮವ ಬೆಳಗಿದ ಋಷಿ ಪರಂಪರೆ ರಾಷ್ಟ್ರ ರಕ್ಷಿಸಿದ ಸಂಘರ್ಷ ಹಿಂದುತ್ವದ ಜಯಭೇರಿಯ ಮೊಳಗಿದೆ ವಿವೇಕಾದಿಗಳ ಆದರ್ಶ ಜನಜನರೆದೆಯಲಿ ತುಂಬುತ ಸ್ಫೂರ್ತಿ ಧರ್ಮಜಾಗೃತಿಯು ಮೂಡುತಿದೆ […]

Read More