ಅಖಂಡ ಹಿಂದು ಭಾರತ ಸಾಧನೆಗೊಂದುಗೂಡಿ ಬನ್ನಿ ಹೆಬ್ಬಯಕೆಯ ಸಾಧಿಸುವ ಹಾದಿಯಲಿ ಎಲ್ಲರೊಂದೆ ಎನ್ನಿ || ಪ || ಜಗತ್ತಿನೆಲ್ಲೆಡೆ ಸಾಕ್ಷಿಯಾಗಲಿದೆ ಭರತನಾಳಿದ ದೇಶ ಸಾಸಿರ ದಾಳಿಗೆ ಉತ್ತರವಿತ್ತ ವೀರಧೀರ ಸಂಘರ್ಷ ಹಿನ್ನಡೆಯಾಗಿದೆ ಸತ್ತಿಲ್ಲ ಮನೆ ಮನದೊಳಡಗಿದೆ ಹಿಂದುತ್ವ ಭೂಮಿ ಎಲ್ಲೆಡೆ ಪಾಲಿಸಬೇಕಿದೆ ಭಾರತೀಯ ಸತ್ವ ಮಾನವತೆಯ ತತ್ವ || 1 || ಸೋಲಿನ ಶೂಲಕೆ ಸಿಲುಕಿ ನರಳುವ ಹೇಡಿ ಜನಾಂಗವು ನಾವಲ್ಲ ಮೃತ್ಯುವಿನೆದೆಗೆ ಅಂತ್ಯ ಸಾರುವ ಧೀರ ಹೃದಯಗಳೇ ನಾವೆಲ್ಲ ಎಮ್ಮ ಪೂರ್ವಜರು ಕೊಡಲಿ ಎತ್ತಿದರೆ ತಲೆಬಾಗಿತ್ತು […]