ನೋಡಿದೆಯಾ ಭರತಸುತ ಭಾರತದ ಬಾನಿನಲಿ ಭಾಗ್ಯರವಿ ತಾನುದಿಸಿ ಬರುತಲಿಹುದ ವರುಷ ಸಾಸಿರದಿಂದ ಬಂದಿರುವ ಭಿನ್ನತೆಯ ಕಲುಷಗಳ ಕಾರ್ಮುಗಿಲ ಕಳೆದು ಬೆಳಗುತಲಿ || ಪ || ಹೃದಯದಲಿ ಕುದಿರಕ್ತ ಮನಕೇಕೆ ಮುದಿತನವು ಹದಗೊಳಿಸು ಮೈಮನವ ಕದನದಂಕಣಕೆ ನಾಯಕನು ನೀನಾಗು ಸಾಯಕಂಗಳ ಧರಿಸು ಕಾಯವನು ಕಾಯಕಕೆ ಅಣಿಗೊಳಿಸು ಎನುತ || 1 || ಸ್ಫುರಣಗೊಳ್ಳಲಿ ಧೈರ್ಯ ಸ್ಥೈರ್ಯ ಬಲತೇಜಗಳು ಮರಣ ಮುಖನಂತಿರುವ ತರುಣ ನಿನ್ನೊಳಗೆ ಹರನಗೆಲಿದಿಹ ನರನ ವಾರಸಿಕೆ ನಿನಗಿಹುದು ಸ್ಮರಣೆಗೊಳ್ಳುತ ಕುವರ ಎದ್ದು ನಿಲ್ಲೆನುತ || 2 || […]
ಏಕಾತ್ಮ ಭಾರತದ ಶತಕೋಟಿ ಕಾಯಗಳ ಧಮನಿಯೊಳು ಉಕ್ಕುತಿಹ ನೆತ್ತರೊಂದೇ | ಹೃದಯದೊಳು ಸ್ಪಂದಿಸುವ ಭಾವ ಒಂದೇ || ಹಿಂದುತ್ವವೀ ನೆಲದ ಮೂಲಮಂತ್ರ .. ಈ ಪುಣ್ಯಭೂಮಿಗದೇ ಜೀವಯಂತ್ರ || ಪ || ನಮ್ಮ ಪ್ರಾಚೀನತೆಯ ಶ್ರೇಷ್ಠತಮ ಸಂಸ್ಕೃತಿಯ ರವಿಕಿರಣ ವಿಶ್ವವನೆ ಬೆಳಗುತಿಹುದು ವಿವಿಧತೆಯೊಳೇಕತೆಯ ಸಮರಸದ ಸಂಹಿತೆಯ ಆದರ್ಶ ಜನಮನವ ಬೆಸೆಯುತಿಹುದು || 1 || ಸುವಿಚಾರ ಬದ್ಧತೆಗೆ ಆಚಾರ ಶುದ್ಧತೆಗೆ ಭಾರತದೊಳಿಹುದೆಂದೂ ಅಗ್ರ ಪ್ರಾಶಸ್ತ್ಯ […]
ಭಾರತದಾ ನವ ತರುಣರಂಗದಿ ಸತ್ಯ ಅಸತ್ಯದ ಸಮರ ಬೆಳೆದು ಹಿಂದು ಬಲ ಅಳಿದು ವಾಮಛಲ ಕರಗಲಿದೆ ಭ್ರಮೆ ತಿಮಿರ ಕೇಶವನಿರುವೆಡೆ ಧರ್ಮ ಧರ್ಮಕೆ ಜಯ ಯುಗ ನಿಯಮ || ಪ || ಶತಶತಮಾನದ ಮೌಢ್ಯದ ಗೋಡೆ ಒಡೆಯಲಿ ಅಳಿಸುತ ನೋವ ಕನಕ ಭಕ್ತಿಗೆ ಸಂಘ ಶಕ್ತಿಗೆ ಒಲಿಯುವ ಸಮಾಜ ದೇವಾ ಧ್ವನಿಸಲಿ ಹಿಂದೂ ಭಾವ ಪುನರುತ್ಥಾನ ಪುನರುಜ್ಜೀವನ ಗರ್ಭಗುಡಿಯ ಮಡಿಲಿಂದ ನವ ನಿರ್ಮಾಣದ ಪ್ರತಿ ಶಿಲೆಕಲ್ಲಿಗೂ ಸಮರಸ ಸೂತ್ರದ ಬಂಧ ಭೇದ ಬೆದರುವ ಸ್ವಾರ್ಥ ಕುತಂತ್ರ ಬಯಲಾಗುತ […]