ಏಕಾತ್ಮ ಭಾರತದ ಶತಕೋಟಿ ಕಾಯಗಳ ಧಮನಿಯೊಳು ಉಕ್ಕುತಿಹ ನೆತ್ತರೊಂದೇ | ಹೃದಯದೊಳು ಸ್ಪಂದಿಸುವ ಭಾವ ಒಂದೇ || ಹಿಂದುತ್ವವೀ ನೆಲದ ಮೂಲಮಂತ್ರ .. ಈ ಪುಣ್ಯಭೂಮಿಗದೇ ಜೀವಯಂತ್ರ || ಪ || ನಮ್ಮ ಪ್ರಾಚೀನತೆಯ ಶ್ರೇಷ್ಠತಮ ಸಂಸ್ಕೃತಿಯ ರವಿಕಿರಣ ವಿಶ್ವವನೆ ಬೆಳಗುತಿಹುದು ವಿವಿಧತೆಯೊಳೇಕತೆಯ ಸಮರಸದ ಸಂಹಿತೆಯ ಆದರ್ಶ ಜನಮನವ ಬೆಸೆಯುತಿಹುದು || 1 || ಸುವಿಚಾರ ಬದ್ಧತೆಗೆ ಆಚಾರ ಶುದ್ಧತೆಗೆ ಭಾರತದೊಳಿಹುದೆಂದೂ ಅಗ್ರ ಪ್ರಾಶಸ್ತ್ಯ […]
ಸ್ವರ್ಗದ ಸೊಬಗನು ಮೀರಿಸಿ ಮೆರೆದಿಹ ಭಾರತದ ಅಂಗಳದಲ್ಲಿ ಕೇಶವ ಉರಿಸಿದ ಸಂಘದ ಹಣತೆಯು ಬೆಳಗಿತು ಜನಮನ ಮನದಲ್ಲಿ || ಪ || ತನ್ನೀ ನೆಲಜಲ ಧರ್ಮಸಂಸ್ಕೃತಿ ಹಿಂದೂ ಜನತೆಯು ಮರೆತಿರಲು ದಾಸ್ಯದ ಉರುಳಿಗೆ ಕೊರಳನು ನೀಡಿ ಸ್ವಾರ್ಥದ ಕೂಪದಿ ಮುಳುಗಿರಲು ಘೋರ ನಿರಾಶೆಯ ಘನ ತಿಮಿರದಿ ತಾ ಯುವ ಜನತೆಯು ಎದೆಗುಂದಿರಲು ಕೇಶವ ತೋರಿದ ಧ್ಯೇಯದ ಗಾದಿ ಅಂತಿಮ ವಿಜಯದ ಹಾದಿಯೊಳು ಮಾತೆಯ ಸೇವೆಯ ಅನುದಿನ ಮಾಡಲು ಜೀವನವನೆ ಮುಡಿಪಾಗಿಡಲು || 1 || ಭಾರತದೇಶದ ಭವ್ಯಪರಂಪರೆ […]
ಭಾರತದಾ ನವ ತರುಣರಂಗದಿ ಸತ್ಯ ಅಸತ್ಯದ ಸಮರ ಬೆಳೆದು ಹಿಂದು ಬಲ ಅಳಿದು ವಾಮಛಲ ಕರಗಲಿದೆ ಭ್ರಮೆ ತಿಮಿರ ಕೇಶವನಿರುವೆಡೆ ಧರ್ಮ ಧರ್ಮಕೆ ಜಯ ಯುಗ ನಿಯಮ || ಪ || ಶತಶತಮಾನದ ಮೌಢ್ಯದ ಗೋಡೆ ಒಡೆಯಲಿ ಅಳಿಸುತ ನೋವ ಕನಕ ಭಕ್ತಿಗೆ ಸಂಘ ಶಕ್ತಿಗೆ ಒಲಿಯುವ ಸಮಾಜ ದೇವಾ ಧ್ವನಿಸಲಿ ಹಿಂದೂ ಭಾವ ಪುನರುತ್ಥಾನ ಪುನರುಜ್ಜೀವನ ಗರ್ಭಗುಡಿಯ ಮಡಿಲಿಂದ ನವ ನಿರ್ಮಾಣದ ಪ್ರತಿ ಶಿಲೆಕಲ್ಲಿಗೂ ಸಮರಸ ಸೂತ್ರದ ಬಂಧ ಭೇದ ಬೆದರುವ ಸ್ವಾರ್ಥ ಕುತಂತ್ರ ಬಯಲಾಗುತ […]
ಓ ಬೆಳಗಲಿಹುದದೋ ಭಾರತದ ಬಾನಂಚು ಸತ್ತುರುಳುತಿದೆ ನಿಶಾಸುರನ ಸಂಚು ಮೊಳಗುತಿದೆ ಸ್ಪೂರ್ತಿಯಲಿ ನೆಲದೊಕ್ಕೊರಲ ಕಂಚು ಅರಳುತಿದೆ ಪ್ರೇರಣೆಯ ಲತೆಯ ಮಿಂಚು || ಪ || ಭುವಿಯಾಳಕಿಳಿದಿಳಿದು ಬೇರುಗಳ ಬಾಯಿಂದ ನೆಲದೆದೆಯ ಪೀಯೂಷ ಪಡೆದು ಕುಡಿದು ಹೆಬ್ಬಂಡೆಗಳನೆಬ್ಬಿಸುವ ಹೆಮ್ಮರದ ಹಾಗೆ ಇಲ್ಲಿದೋ ಏಳುತಿದೆ ತರುಣಶಕ್ತಿ […]