ತವಪದಕೆ ಕೋಟಿ ನಮನ ಉದಿಸಿ ಬಾರೋ ಮಾಧವ || ಪ || ಶುದ್ಧ ಹೃದಯ ಮುಗ್ಧ ಮನದ ಓ ಪ್ರಭುದ್ಧ ಮಾನವ ಭರತಸುತರ ಜಡತೆ ನೀಗಲುದಿಸಿ ಬಂದ ಮಾಧವ ದುಗ್ಧ ಧವಳ ಹಿಮದಗಿರಿಯ ಉನ್ನತಿಯನು ಮೆರೆದವ ದಗ್ಧ ಮನಕೆ ತಂಪನೆರಚಿ ಧ್ಯೇಯ ಧಾರೆ ಎರೆದವ || 1 || ಮೇರುಗಿರಿಯ ಮಾರ್ಗವೆಂದು ಕಂಟಕಮಯ ದುರ್ಗಮ ಅವನು ತೋರ್ದ ಪಥದಿ ನಡೆಯೆ ಸಾಧ್ಯವಿಹುದು ವಿಕ್ರಮ ಧ್ಯೇಯನಿಷ್ಠೆ ವೀರವ್ರತಕೆ ಜ್ಞಾನಗಂಗೆ ಸಂಗಮ ಶಕ್ತಿಶೀಲ ಜತೆಗೆ ಸೇರೆ ಮೂಡಿಬಂತು ಸಂಭ್ರಮ || […]
ವನವಾಸ ಕಳೆದದ್ದಾಯಿತು ಬಾರೋ ರಾಮ ಒಳಗೆ ಬಯಲಲ್ಲಿ ಕಾದದ್ದಾಯಿತು ಬಾರೋ ನಿನ್ನ ಅರಮನೆಗೆ || ಪ || ಸುಖಮಯ ಭವಿಷ್ಯ ಪಣವಿಟ್ಟು ಕರಸೇವಕರು ನೂರಾರು ಯುಗಸಂಕಲ್ಪವೀಡೇರಲು ಭೀಮ ಸಾಹಸ ತೋರಿದರು ತ್ಯಾಗ ಶೌರ್ಯ ಮೆರೆಯುತಲಿ ಪೀಳಿಗೆಯಿಂದ ಪೀಳಿಗೆಗೆ ಸೃಜಿಸುತಲಿ ನವ ಇತಿಹಾಸ, ಬಾರೋ ನಿನ್ನ ಅರಮನೆಗೆ || 1 || ರಾಮನ ವಚನವು ಎಂದೆಂದೂ ಸುಳ್ಳಾದದ್ದೇ ಕಂಡಿಲ್ಲ ರಾಮನ ಬಾಣವು ಎಂದಿಗೂ ಗುರಿ ತಪ್ಪಿದ್ದೇ ನೋಡಿಲ್ಲ ನಿನ್ನಯ ಭಕ್ತರ ಸಂಕಲ್ಪ ಅಮಿತ ಭಕ್ತಿಯ ಶಕ್ತಿಗೆ ಎಂದೂ ಕೂಡ […]
ಆರತಿ ಬೆಳಗಲು ಬಾರೋ ಗೆಳೆಯ ಭಾರತಿ ಎನ್ನಲು ನಲಿಯಲಿ ಹೃದಯ ಮಮತೆಯ ಮೂರುತಿ ಮಾತೆಯ ಕೀರುತಿ ಅನುದಿನ ಹಾಡಲು ಬಾ ಬಾ ಸದಯ || ಪ || ಕೋಟಿ ಕೋಟಿ ಜನರೆದೆಯನು ಮೀಟುತ ಪುಲಕಿತಗೊಳಿಸುತ ಮನ ಅರಳಿಸುತ ಮಾತೃಪ್ರೇಮದಾ ಅಮೃತ ನೀಡುವ ಈ ಶುಭಮಂಗಳೆಗಿದೊ ಪೊಡಮಡುವ || 1 || ಲಕ್ಷಲಕ್ಷ ನರಜನ್ಮವನೆತ್ತಿ ಸಾವಿರ ಸಲ ಭೂಮಂಡಲ ಸುತ್ತಿ ಬಂದರೆ ಸಿಗುವುದೆ ಇಂತಹ ನೆಲವು ? ಪುಣ್ಯ ಪ್ರಸಾದವು – ಈ ತಾಯೊಲವು || 2 || […]
ಸಂಘಜನಕ ಕೇಶವಾ ಜನ್ಮತಳೆದು ಬಾರೋ ಧ್ಯೇಯಮಾರ್ಗದಲ್ಲಿ ನಮಗೆ ದಾರಿ ತೋರೋ || ಪ || ಕೆಸರ ಒಡಲಿನಿಂದ ಕಮಲ ಅರಳಿದಂತೆ ಮರಳುಗಾಡಿನಲ್ಲಿ ಹಸಿರು ಮೂಡಿದಂತೆ ನಿಶೆಯನಳಿಸಿ ಉಷೆಯು ಉದಿಸಿದಂತೆ ಸಂಘ ಜನಿಸಿತು ಬೇಗೆಯಿಂದ ಬೆಂದ ನೆಲಕೆ ಮುದದಿ ತಂಪನುಣಿಸಿತು || 1 || ನಾಡಸ್ವಾಭಿಮಾನವ ಪ್ರಶ್ನಿಸಿರಲು ದೈನ್ಯತೆ ಬಾಡಿಹೋದ ಮನಗಳ ಕಾಡುತಿರಲು ಶೂನ್ಯತೆ ಅರುಣನಂತೆ ತರುಣಜನಕೆ ತೋರಿ ಬಾಳ ಧನ್ಯತೆ ಭರತಭೂಮಿಗಭಯವಿತ್ತೆ ಸಾರಿ ಶೌರ್ಯ ಸಂಹಿತೆ || 2 || ವಿಸ್ಮೃತಿಯ ವಿಷವನು ಸ್ವಾರ್ಥದಾಮಿಷವನು ಭ್ರಷ್ಟತೆಯ ಕಸವನು […]