ಹಿಂದುಸ್ಥಾನದ ಚಿರ ನವ ಹರಯವೆ, ಹೇ ಹೈಮಾಚಲ ಸಂದರ್ಶನವೆ ಇದೋ ಉದ್ಭವಿಸಿದೆ ಪ್ರಾಣಪ್ರವಾಹವು, ಯುವಜನ ಜಾಹ್ನವಿ ಸಿಂಧೂಬಲವು || ಪ || ರಣಮತ್ತರ ಬಿಸಿನೆತ್ತರ ಬಾಹುವೆ, ಓ ನಾಡಿನ ಯೌವನ ಸಿಡಿದೇಳು ರಾಷ್ಟ್ರದ ನೇತ್ರ ತೃತೀಯ ಸ್ವರೂಪವೆ, ತಾರುಣ್ಯವೇ ಉರಿಗಣ್ ತೆರೆ ಏಳು || 1 || ದೃಢ ನಿಶ್ಚಯದೊಳು ಹೃತ್ಪರ್ವತಗಳು, ಕೋಟ್ಯಂತರ ನಿಂತಿರೆ ರಾಷ್ಟ್ರದಲಿ ದುರ್ಗಮ ದುರ್ಗಗಳೆಚ್ಚರಗೊಳುತಿವೆ, ಅರಿಗೆಂದಿಗು ದೊರೆಯದು ಜಯವಿಲ್ಲಿ || […]