ಪುಣ್ಯಭೂಮಿಯಲಿ ಧ್ಯೇಯದ ಗುಡಿಯು ಗುಡಿಯಲಿ ಅರಳಿವೆ ಅಸಂಖ್ಯ ಸುಮವು ನಡೆದಿದೆ ರಾಷ್ಟ್ರದ ಅರ್ಚನೆಯು || ಪ || ಈಶನ ಕಾರ್ಯಕೆ ಜನಿಸಿದ ಕಾಯ ತುಂಬಿದೆ ಸೋಲರಿಯದ ಬಲ ಧೈರ್ಯ ಧಮನಿ ಧಮನಿಯಲಿ ಹರಿದಿದೆ ಶೌರ್ಯ ನಾಡ ರಕ್ಷಣೆಗೆ ಅನುದಿನವು || 1 || ಜಗ ತಲೆಬಾಗುವ ಶೀಲದ ನಡತೆ ಜನಮನ ಬೆಳಗುವ ಜ್ಞಾನದ ಹಣತೆ ಸಂಚಯ ನವನೇತೃತ್ವದ ಕ್ಷಮತೆ ಅಮಿತೋತ್ಸಾಹದಿ ಕ್ಷಣಕ್ಷಣವು || 2 || ಅಂಜದೆ ಸವಾಲುಗಳ ಸ್ವೀಕರಿಸಿ ಗೆಲ್ಲುವ ಛಲ […]
ಧ್ಯೇಯದಾ ಹಾದಿಗೆ ಬಾಳ ನಡಿಗೆ ಸಾಗಿದೆ ಭಾವ ಹಣತೆ ಉರಿದಿದೆ ತಾಯ ಗುಡಿಯ ಬೆಳಗಿದೆ || ಪ || ಕರದಿ ಸಂಘಸೂತ್ರ ಹಿಡಿದು ಭರದಿ ಹಿಂದುತೇರನೆಳೆದು ತರತಮ ವಿಷ ಕಳೆಯ ಕೀಳಿ ಪರಕೀಯತೆ ಪದರ ಸೀಳಿ ಸಂಘಮಂತ್ರ ಜಪಿಸುತಾ ಬಂಧುಭಾವ ಬೆಳೆಸುತಾ || 1 || ಸ್ವಾರ್ಥ ಭಾವ ದೂರಗೊಳಿಸಿ ಕೀರ್ತಿಮೋಹ ಬದಿಗೆ ಸರಿಸಿ ಅರಳಿಸುತಲಿ ಶುದ್ಧ ಶೀಲ ಅರ್ಪಿಸುತಲಿ ಬದ್ಧ ಬಾಳ ಬನ್ನಿ ತಾಯಸೇವೆಗೆ ಉರಿಸಿ ಕಾಯ ದೀವಿಗೆ || 2 || ವ್ಯಕ್ತಿ ವ್ಯಕ್ತಿಗಳನು […]