ಭರತಭೂಮಿಯ ಭಾಗ್ಯ ಉದಿಸಿದೆ

ಭರತಭೂಮಿಯ ಭಾಗ್ಯ ಉದಿಸಿದೆ ಏಳು ಮೇಲಕೆ ತರುಣನೆ ಭರದಿ ಸೇರಲಿ ಕೋಟಿ ಕರಗಳು ತರಲು ಶುಭಪರಿವರ್ತನೆ || ಪ || ಗರ್ಜಿಸುವುದನು ಮರೆತು ಸಿಂಹವದೇಕೆ ನರಿಗಳ ನೆಚ್ಚಿದೆ? ಸಜ್ಜನರ ನಿಷ್ಕ್ರಿಯತೆ ಕಾರಣ ದುರ್ಜನರ ಬಲ ಹೆಚ್ಚಿದೆ! ಆವ ದೈವವು ಕಾವುದೆನ್ನುತ ಬಾಗಿ ಕಂಗಳ ಮುಚ್ಚಿದೆ? ದೇವದುರ್ಲಭ ಸಂಘಟನೆಯಿದೆ ಸಾಗು ಬೆದರದೆ ಬೆಚ್ಚದೆ! || 1 || ಸೌಮ್ಯ ಸಂಸ್ಕೃತಿ ಸುಧೆಗೆ ಪೂತನಿ ವಿಷವನಿಕ್ಕುವ ಸಂಚಿದೆ ಸಾಮ್ಯವಾದದ ಮಾಯೆ ಜಿಂಕೆಯು ನಾಡನೊಡೆಯಲು ಹೊಂಚಿದೆ ಶಸ್ತ್ರಶಾಸ್ತ್ರದೊಳಾರು ನಿನಗೆಣೆ ನುಗ್ಗು ಸ್ಫೂರ್ತಿಯ […]

Read More

ಏಳು, ಮೇಲೇಳು ಸಾಧುವೆ (ಚಾಗಿಯ ಹಾಡು)

ಏಳು, ಮೇಲೇಳೇಳು ಸಾಧುವೆ, ಹಾಡು ಚಾಗಿಯ ಹಾಡನು; ಹಾಡಿನಿಂದೆಚ್ಚರಿಸು ಮಲಗಿಹ ನಮ್ಮ ಈ ತಾಯ್ನಾಡನು ! ದೂರದಡವಿಯೊಳೆಲ್ಲಿ ಲೌಕಿಕ ವಿಷಯವಾಸನೆ ಮುಟ್ಟದೊ, ಎಲ್ಲಿ ಗಿರಿಗುಹೆ ಕಂದರದ ಬಳಿ ಜಗದ ಗಲಿಬಿಲಿ ತಟ್ಟದೊ, ಎಲ್ಲಿ ಕಾಮವು ಸುಳಿಯದೋ, – ಮೇಣ್ ಎಲ್ಲಿ ಜೀವವು ತಿಳಿಯದೋ ಕೀರ್ತಿ ಕಾಂಚನವೆಂಬುವಾಸೆಗಳಿಂದ ಜನಿಸುವ ಭ್ರಾಂತಿಯ, ಎಲ್ಲಿ ಆತ್ಮವು ಪಡೆದು ನಲಿವುದೊ ನಿಚ್ಚವಾಗಿಹ ಶಾಂತಿಯ, ನನ್ನಿಯರಿವಾನಂದವಾಹಿನಿಯೆಲ್ಲಿ ಸಂತತ ಹರಿವುದೋ, ಎಲ್ಲಿ ಎಡೆಬಿಡದಿರದ ತೃಪ್ತಿಯ ಝರಿ ನಿರಂತರ ಸುರಿವುದೋ, ಅಲ್ಲಿ ಮೂಡಿದ ಹಾಡನುಲಿಯೈ, ವೀರ ಸಂನ್ಯಾಸಿ […]

Read More