ಕೇಶವನ ಕಲ್ಪನೆಯನು ಮಾಧವನ ಮಾರ್ಗವನು ಅನುಸರಿಸುತ ಮುನ್ನಡೆದಿಹ ಕಾರ್ಯಾರ್ಥಿಗಳು ನಾವು ಧ್ಯೇಯಕೇತನದೆದುರು ಶರಣಾರ್ಥಿಗಳು ನಾವು || ಪ || ಮತಜಾತಿಯ ಭೇದವಿರದೆ ನೆಲಭಾಷೆಯ ಜಗಳವಿರದೆ ಸಮರಸತೆಯ ಏಕತೆಯಲಿ ಸಚ್ಚರಿತವ ಸಂಕಲಿಸುತ ಸಂಘಸುಧಾಸಿಂಧುವಲಿಹ ಕಾರ್ಯಾರ್ಥಿಗಳು ನಾವು || 1 || ಹೊನ್ನುಹಣದ ಮೋಹವಿರದೆ ಅಧಿಕಾರದ ದಾಹವಿರದೆ ಕರ್ತವ್ಯದ ಭಾವ ಬೆಳೆಸಿ ಮಾತೃಭೂಮಿ ರಕ್ಷೆಗಾಗಿ ಅನವರತವು ನಿರತರಿರುವ ಕಾರ್ಯಾರ್ಥಿಗಳು ನಾವು || 2 || ವೈಭವೋತ್ತುಂಗದಲಿ ಮತ್ತೆ ಮೆರೆವ ಭಾರತಿಯನು ಇದುವೆ ದೇಹದಕ್ಷಿಯಿಂದ ಕಾಣಲೆಂದು ಹಂಬಲಿಸುತ ಸಂಕಲ್ಪವ ಸ್ವೀಕರಿಸಿಹ ಕಾರ್ಯಾರ್ಥಿಗಳು […]