ಏಕಾತ್ಮ ಭಾರತದ ಶತಕೋಟಿ ಕಾಯಗಳ ಧಮನಿಯೊಳು ಉಕ್ಕುತಿಹ ನೆತ್ತರೊಂದೇ | ಹೃದಯದೊಳು ಸ್ಪಂದಿಸುವ ಭಾವ ಒಂದೇ || ಹಿಂದುತ್ವವೀ ನೆಲದ ಮೂಲಮಂತ್ರ .. ಈ ಪುಣ್ಯಭೂಮಿಗದೇ ಜೀವಯಂತ್ರ || ಪ || ನಮ್ಮ ಪ್ರಾಚೀನತೆಯ ಶ್ರೇಷ್ಠತಮ ಸಂಸ್ಕೃತಿಯ ರವಿಕಿರಣ ವಿಶ್ವವನೆ ಬೆಳಗುತಿಹುದು ವಿವಿಧತೆಯೊಳೇಕತೆಯ ಸಮರಸದ ಸಂಹಿತೆಯ ಆದರ್ಶ ಜನಮನವ ಬೆಸೆಯುತಿಹುದು || 1 || ಸುವಿಚಾರ ಬದ್ಧತೆಗೆ ಆಚಾರ ಶುದ್ಧತೆಗೆ ಭಾರತದೊಳಿಹುದೆಂದೂ ಅಗ್ರ ಪ್ರಾಶಸ್ತ್ಯ […]