ನನ್ನ ನಾಡ ಚೆನ್ನ ನಾಡ ಬನ್ನಬಡುತ ಪೊರೆಯುವಾ ನನ್ನಿಯಿಂದ ತಾಯಿನಾಡ ಹೊನ್ನ ಸಿರಿಯ ಬೆಳಗುವಾ || ಪ || ರಾಮಕೃಷ್ಣ ವಿದ್ಯಾರಣ್ಯ ವ್ಯಾಸರನ್ನು ಸ್ಮರಿಸುವಾ ಬುದ್ಧ ಬಸವ ಶಂಕರಾದಿ ಗುರುಗಳನ್ನು ನಮಿಸುವಾ ಶಿವ ಪ್ರತಾಪ ಹರಿಹರಾದಿ ಭೂಪರನ್ನು ಸ್ಮರಿಸುವಾ ಚಂದ್ರಗುಪ್ತ ಪುಲಿಕೇಶಿ ವೀರರನ್ನು ನಮಿಸುವಾ ನಾಡಮೇಲ್ಮೆಗಾಗಿ ದುಡಿದ ಇವರ ಸ್ಮರಣೆ ಮಾಡುವಾ ನಾಡಮೇಲ್ಮೆಯಲ್ಲಿ ನಮ್ಮ ಮೇಲ್ಮೆಯನ್ನು ಕಾಣುವಾ || 1 || […]