ಭಾರತದ ಯುವಜನತೆ ಸಿಡಿದೆದ್ದು ನಿಂತಿಹುದು ದೇವದುರ್ಲಭವೆನಿಪ ಸಂಘಶಕ್ತಿ || ಪ || ಧ್ಯೇಯ ಜಲಸಿಂಚನಕೆ ಕನಸೊಡೆದು ಮೇಲೆದ್ದು ಮೈ ಮರೆವಿನ ಪದರ ಕಿತ್ತುಬಿಸುಟು ಮುದುರಿರುವ ಗರಿಬಿಚ್ಚಿ ಗಗನಾಂಗಣಕೆ ಜಗದಗಲ ಸಂಚರಿಪ ಗರುಡನಂದದಲಿ || 1 || ತರತಮದ ಭೇದಗಳು ಅಳಿಸುತಲಿ ಜಸನದಲಿ ಬೆಸಯುತಲಿ ಮನಮನಕೆ ಭಾವಸಂಪರ್ಕ ಭಿನ್ನತೆಯ ಭಾರದಲಿ ಬಸವಳಿದ ಭಾರತಿಗೆ ಏಕರಸ ಧಾರೆಯಲಿ ಕಾಯಕಲ್ಪ || 2 || ಅಕ್ಷಯದ ಬತ್ತಳಿಕೆ ಶಿಶು ಬಾಲ ತರುಣ ಗಣ ಹೆದೆಯೇರ್ದ ಗಾಂಢಿವ ಪ್ರಾಢಗಢಣ ಗೋವು ಗ್ರಾಮದ ರಕ್ಷೆ […]