ಕೇಶವನ ಕರಗಳಿಂದ ರೂಪು ತಳೆದ ಯಾದವ

ಕೇಶವನ ಕರಗಳಿಂದ ರೂಪು ತಳೆದ ಯಾದವ ತೆರೆಯ ಮರೆಯ ಸಾಧಕರಿಗೆ ಅಮರಸ್ಫೂರ್ತಿಯಾದವ ಧ್ಯೇಯಮೂರ್ತಿಯಾದವ … ಹರಸು ನಮ್ಮ ಬಾಂಧವ || ಪ || ಬಾಲ್ಯದಾ ದಿನಗಳಲ್ಲಿ ಮಧುರ ದನಿಯ ಗಾಯಕ ಸಂಘಟನೆಯ ದೀಕ್ಷೆ ಧರಿಸಿ ಆದೆಯೊ ಘನಸಾಧಕ ಧ್ಯೇಯಕಾಗಿ ದೇಹ ಸವೆಸಿದಂಥ ನಿನ್ನ ಜೀವನ ಸಾರ್ಥಕತೆಯ ವೀರಗಾಥೆ ನಿನ್ನ ಜನುಮ ಪಾವನ || 1 || ಕಲ್ಲುಮುಳ್ಳು ವಿಘ್ನಕೋಟಿ ಎಲ್ಲ ಮೆಟ್ಟಿ ಕ್ರಮಿಸಿದೆ ಹಸಿವು ನಿದ್ದೆ ಪರಿವೆ ತೊರೆದು ನಾಡಿಗಾಗಿ ಶ್ರಮಿಸಿದೆ ಶೂನ್ಯದಲ್ಲಿ ಸೃಷ್ಟಿಗೈದ ನಿನ್ನ ಕಾರ್ಯಶಕ್ತಿಗೆ […]

Read More