ಅವತರಿಸು ಶ್ರೀರಾಮ ಈ ಭರತ ಭುವಿಗೆ

ಅವತರಿಸು ಶ್ರೀರಾಮ ಈ ಭರತ ಭುವಿಗೆ| ಉದ್ಧರಿಸಲೀ ಜಗವ ಬಾರಯ್ಯ ಧರೆಗೆ| ಆಗಮಿಸು ಓಗೊಡುತ ಭಾರತದ ಕರೆಗೆ| ಸ್ಪಂದಿಸುತ ಶತಕೋಟಿ ಭಕ್ತರಾ ಮೊರೆಗೆ || ಪ || ಶ್ರೀರಾಮ ಜಯರಾಮ ಕೋದಂಡರಾಮ| ಶ್ರೀರಾಮ ಜಯರಾಮ ಪಟ್ಟಾಭಿರಾಮ|| ತವ ಜನ್ಮಭೂಮಿಯನು ಮುಕ್ತಗೊಳಿಸುವ ಕಾರ್ಯ| ಶತಕಗಳ ಹೋರಾಟ ಆಯಿತನಿವಾರ್ಯ| ಮರೆಯಲಾಪುದೆ ಕಾರಸೇವಕರ ಕೈಂಕರ್ಯ ಸಫಲವಾಯಿತು ಸಂತ ಭೀಷ್ಮ ಸಾರಥ್ಯ || 1 || ಬೆವರು ನೆತ್ತರ ಹರಿಸಿ ಪ್ರಾಣವನೆ ಪಣವಿಟ್ಟು| ಅಸುನೀಗಿದಗ್ರಜರೇ ಎಮಗೆ ಮೇಲ್ಪಂಕ್ತಿ| ದುಷ್ಟಕುಲ ಮರ್ದನಕೆ ರಾಷ್ಟ್ರಸಂರಕ್ಷಣೆಗೆ| ಕೋದಂಡಧರ […]

Read More

ಬಂದಾ ಸ್ವಾಮಿ ಬಂದಾ ಶ್ರೀರಾಮ ಬಂದಾ

ಬಂದಾ ಸ್ವಾಮಿ ಬಂದಾ ಶ್ರೀರಾಮ ಬಂದಾ ಅಜ್ಞಾತವಾಸದಿಂದ ಗುಮ್ಮಟದ ಅಡಿಯಿಂದ ಧರ್ಮ ನ್ಯಾಯ ನೀತಿ ಉಳಿಸೆ ರಾಮನೆದ್ದು ಬಂದಾ ಅಯೇೂಧ್ಯ ನಗರಕೆ ಮತ್ತೆ ಬಂದಾ ನಮ್ಮ ಸ್ವಾಮಿ ಬಂದಾ ಶ್ರೀರಾಮಚಂದ್ರ ಪ್ರಭು ಬಂದಾ || ಪ || ಕಷ್ಟಕಾರ್ಪಣ್ಯವನು ಕೊನೆಗಾಣಿಸೆ ಬಂದಾ ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಲು ಶ್ರೀರಾಮ ಬಂದಾ ಕುಣಿಕುಣಿಯುತ ಬಂದಾ ನಲಿನಲಿಯುತ ಬಂದಾ ದೇವರದೇವ ಶ್ರೀರಾಮ ಬಂದಾ || 1 || ಢಮ ಢಮರು ನಾದದಲಿ ಘಂಟೆಯ ನಿನಾದಲಿ ಝೇಂಕರಿಸಿಹ ವೀಣೆಯಲಿ ಮೇೂಳಗುತಿಹ ಶಂಖದಲಿ […]

Read More

ಮಾತೆ ಶ್ರೀ ಭಾರತೀಯ ಸಂಸ್ಕೃತಿ

ಮಾತೆ ಶ್ರೀ ಭಾರತೀಯ ಸಂಸ್ಕೃತಿ ಅರಿವಿನಲಿ ಎದೆ ತುಂಬುವಾ ತಾಯಿನಾಡಿನ ಐಕ್ಯ ದರ್ಶನ ಪಡೆದು ಮಾತೆಗೆ ನಮಿಸುವಾ || ಪ || ಯಾವ ಜಾತಿಯದಾದರೇನೈ ಎಲ್ಲ ಪೂಜೆಯು ಮುಕ್ತಿಗೆ ಯಾವ ಗರಡಿಯದಾದರೇನೈ ಎಲ್ಲ ಸಾಧನೆ ಶಕ್ತಿಗೆ || 1 || ಯಾವ ಪ್ರಾಂತ್ಯದ ಭಾಗವೇನ ಎಲ್ಲ ಮಣ್ಣು ಭಾರತ ಯಾವ ಬಾಯಿಯ ಹೇಗೆ ನುಡಿಯಲಿ ಅರ್ಥ ಮುಖ್ಯವು ಅವಿರತ || 2 || ದೇಶಭಕ್ತಿಯ ದೈವಶಕ್ತಿಯ ತುಂಬಿ ಎದೆಎದೆ ಉಕ್ಕಲಿ ಮಾನವೀ ಸಮರಸದ ಬಾಳುವೆ ಭಾಗ್ಯ ಭಾರತಿ […]

Read More

ಶ್ರೀ ವಿವೇಕಾನಂದ ಗುರುವರ (ಕುವೆಂಪು)

ಶ್ರೀ ವಿವೇಕಾನಂದ ಗುರುವರ, ನವಯುಗಾಚಾರ್ಯ, ರಾಮಕೃಷ್ಣರ ಭೀಮಶಿಷ್ಯನೆ, ವೀರ ವೇದಾಂತಿ, ಭಾರತಾಂಬೆಯ ಧೀರಪುತ್ರನೆ, ಸಾಧು ಭೈರವನೆ, ಸ್ಥೈರ್ಯದಚಲವೆ, ಧೈರ್ಯದಂಬುಧಿ, ಜಯತು! ಜಯ ಜಯತು! || ಪ || ಮೊರೆದು ಗರ್ಜಿಪ ಕಡಲ ವಾಣಿಯು ನಿನ್ನ ವರವಾಣಿ, ಕಾರಮಿಂಚನು ನಗುವ ತೇಜವು ನಿನ್ನ ಮೈ ಕಾಂತಿ, ಆಳವಂಬುಧಿಯಾಳ ಮೇರೆಯೆ ನಭದ ವಿಸ್ತಾರ ಮಂದರಾದ್ರಿಯ ಮೀರಿದಚಲನು ನೀನು, ಯೋಗೀಂದ್ರ ! || 1 || ನಿನ್ನ ಹೆಸರದೆ ಶಕ್ತಿಯೀಯುವ ದಿವ್ಯತರ ಮಂತ್ರ ನಿನ್ನ ಮಾರ್ಗವೆ ಮುಕ್ತಿದಾಯಕವಾದ ವರಮಾರ್ಗ ನಮ್ಮ ಹೃದಯಕೆ […]

Read More