ನಾಡನೊಡೆದು ಗಾದಿಪಡೆದು ಸ್ವತ್ವ ಮರೆತು ಸ್ವಾರ್ಥ ಕಲಿತು ಸ್ವಜನ, ಬಂಧು ಭಗಿನಿಯರನು ವೈರಿ ಸೆರೆಗೆ ದೂಡಿದೆ ; ಹೃದಯ ಹರಿದು ಮನವ ಮುರಿದು ರಾಷ್ಟ್ರದೊಡಲ ಕೊರೆದು ಕೊರೆದು ಮಾತೃಕ್ಷೀರ ಮೂಲೆಗಿರಿಸಿ ಘೋರವಿಷವನೂಡಿದೆ ! || ಪ || ಶೀಲ ಸತ್ಯ ನಲಿದ ನೆಲದಿ, ರಾಮರಾಜ್ಯ ಮೆರೆದ ಸ್ಥಳದಿ ಭ್ರಷ್ಟಗುಣವ ಬೆಳೆದು ಸತ್ಯದೆಲ್ಲ ಹತ್ಯೆಮಾಡಿದೆ ; ವೇದಗಾನ ಭಕ್ತಿಪಾನ, ಶೌರ್ಯ ವಿಭವ ಸ್ವಾಭಿಮಾನ ತೊರೆದು ನಿಂತು ಕರವ ನೀಡಿ ಜಗದಿ ಭಿಕ್ಷೆ ಬೇಡಿದೆ ! || 1 || […]
ಕಟ್ಟಬನ್ನಿ ತರುಣರೇ ನವಭಾರತ ದೇಶವ ಸ್ವತ್ವ ಸ್ವಾಭಿಮಾನಭರಿತ ಶಕ್ತಿವಂತ ರಾಷ್ಟ್ರವ… ನವಭಾರತ ದೇಶವ || ಪ || ಕಿತ್ತುಬಿಸುಟು ಸುತ್ತಲಿರುವ ವಿಷಮ ವಿಷದ ಕಳೆಯನು ಬಿತ್ತಿ ಬೆಳೆದು ತನ್ನತನದ ಹೊನ್ನಿನಂಥ ಬೆಳಯನು ಚಿತ್ತದಲ್ಲಿ ಮನೆಯ ಮಾಡಿದಂಥ ಭ್ರಮೆಯ ತೊಲಗಿಸಿ ಕತ್ತಲನ್ನು ದೂರಗೊಳಿಸಿ ಧ್ಯೇಯದೀಪ ಬೆಳಗಿಸಿ || 1 || ಜಗಕೆ ಅನ್ನ ನೀಡಬಲ್ಲ ಸಾಮರ್ಥ್ಯವು ನಮಗಿರೆ ಕರದೊಳೇಕೆ ಭಿಕ್ಷಾಪಾತ್ರೆ ಅನ್ನಪೂರ್ಣೆ ಈ ಧರೆ ಗಂಗೆ ತುಂಗೆ ಹರಿವ ನೆಲದಿ ಬೇಕೆ ಹಂಗಿನರಮನೆ | ಬೆವರು ಸುರಿಸಿ ಸಾಧಿಸೋಣ […]