ಸಂಗೀತ ಸಾಮ್ರಾಜ್ಯದರಸುತನ ಕಿತ್ತೆಸೆದು ರಾಷ್ಟ್ರಸೇವೆಗೆ ನಿಂತ ಶ್ರೀ ಯಾದವ ಕೇಶವನ ಸಾನಿಧ್ಯ ಮಾಧವನ ಸಾಮೀಪ್ಯ ಸ್ವರ್ಣಮಂದಾರದಲಿ ಸುಮ ಸೌರಭ || ಪ || ಭಾರತಿಯ ಚರಣದಲಿ ಗಾಯನದ ನೈವೇದ್ಯ ಕೀರ್ತಿಮೋಹವ ಮರೆತ ಬಾಳಪಯಣ ರಾಷ್ಟ್ರವೇ ಶ್ರುತಿಲಯವು ಜೀವನವೆ ಸಂಗೀತ ತ್ಯಾಗಮಯ ಸಂಸ್ಕೃತಿಯ ಭೃಂಗಗಾನ || 1 || ಪೂರ್ವಸೂರಿಗಳೆಲ್ಲ ಸಾರಿ ತೋರಿದ ದಾರಿ ಕೃತಿರೂಪವನು ಪಡೆದ ಸಂಘಕಾರ್ಯ ಸ್ಪರ್ಷಮಣಿ ಗುಣಪಡೆದ ಚುಂಬಕದ ಸೆಳೆತದಲಿ ಪ್ರತಿಮನದಿ ಟಿಸಿಲೊಡೆದ ಧ್ಯೇಯವಾದ || 2 || ಭಾಸ್ಕರನ ಬಿಸುಪಿನಲಿ ಚಂದ್ರಮನ ಶೀತಲತೆ […]
ಕೇಶವನ ಕರಗಳಿಂದ ರೂಪು ತಳೆದ ಯಾದವ ತೆರೆಯ ಮರೆಯ ಸಾಧಕರಿಗೆ ಅಮರಸ್ಫೂರ್ತಿಯಾದವ ಧ್ಯೇಯಮೂರ್ತಿಯಾದವ … ಹರಸು ನಮ್ಮ ಬಾಂಧವ || ಪ || ಬಾಲ್ಯದಾ ದಿನಗಳಲ್ಲಿ ಮಧುರ ದನಿಯ ಗಾಯಕ ಸಂಘಟನೆಯ ದೀಕ್ಷೆ ಧರಿಸಿ ಆದೆಯೊ ಘನಸಾಧಕ ಧ್ಯೇಯಕಾಗಿ ದೇಹ ಸವೆಸಿದಂಥ ನಿನ್ನ ಜೀವನ ಸಾರ್ಥಕತೆಯ ವೀರಗಾಥೆ ನಿನ್ನ ಜನುಮ ಪಾವನ || 1 || ಕಲ್ಲುಮುಳ್ಳು ವಿಘ್ನಕೋಟಿ ಎಲ್ಲ ಮೆಟ್ಟಿ ಕ್ರಮಿಸಿದೆ ಹಸಿವು ನಿದ್ದೆ ಪರಿವೆ ತೊರೆದು ನಾಡಿಗಾಗಿ ಶ್ರಮಿಸಿದೆ ಶೂನ್ಯದಲ್ಲಿ ಸೃಷ್ಟಿಗೈದ ನಿನ್ನ ಕಾರ್ಯಶಕ್ತಿಗೆ […]